ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಇದು ಇಡೀ ಸಮಾಜವೇ ತಲೆ ತಗ್ಗಿಸುವಂಥ ಘಟನೆ. ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ ರಚಿಸಲಾಗಿದೆ. ಪ್ರಜ್ವಲ್ ಅವರಿಂದ ಎಷ್ಟು ಮಹಿಳೆಯರು ಅನ್ಯಾಯಕ್ಕೆ ಒಳಗಾಗಿದ್ದಾರೆ ಎಂಬುದು ತನಿಖೆ ನಂತರವೇ ತಿಳಿಯಲಿದೆ. ಅವರು ಸಂಸದರಾಗಿ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆಯೇ ಅಥವಾ ಬೇರೆ ಆಮಿಷವೊಡ್ಡಿ ಮೋಸ ಮಾಡಿದ್ದಾರೆಯೇ ಎಂಬುದು ತಿಳಿಯಬೇಕಿದೆ. ಆದರೆ, ಪ್ರಜ್ವಲ್ ವಿದೇಶಕ್ಕೆ ಹೋಗಿರುವುದರಿಂದ ಸರ್ಕಾರ ಇಂಟರ್ಪೋಲ್ಗಳ ಸಹಾಯ ಪಡೆಯಬೇಕೆಂದು ಬಯಸುತ್ತೇವೆ’ ಎಂದರು.