ಜಿಲ್ಲೆಯ ಚಿಕ್ಕೋಡಿಯಲ್ಲಿ ಭಾನುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಹಳ್ಳಿ ಹಳ್ಳಿಗಳಲ್ಲೂ ಪ್ರಚಾರ ಮಾಡಿ ಅವರನ್ನು ಗೆಲ್ಲಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ. ನಮ್ಮ ಹೈಕಮಾಂಡ್ ಅದೇನು ಕ್ರಮ ತೆಗೆದುಕೊಳ್ಳುತ್ತದೆಯೋ ತೆಗೆದುಕೊಳ್ಳಲಿ. ನನಗೇನೂ ಅಭ್ಯಂತರವಿಲ್ಲ’ ಎಂದು ಸವಾಲು ಹಾಕಿದರು.