<p><strong>ಬೆಳಗಾವಿ: </strong>ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ದಿ.ಸುರೇಶ ಅಂಗಡಿ ಅವರ ಕುಟುಂಬದವರಿಗೆ ಯಾರಿಗೇ ಟಿಕೆಟ್ ನೀಡಿದರೂ ಅವರನ್ನು ಗೆಲ್ಲಿಸುವುದಕ್ಕಾಗಿ ಶ್ರಮಿಸುತ್ತೇನೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಚಿಕ್ಕೋಡಿ ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಹೇಳಿದರು.</p>.<p>ಜಿಲ್ಲೆಯ ಚಿಕ್ಕೋಡಿಯಲ್ಲಿ ಭಾನುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಹಳ್ಳಿ ಹಳ್ಳಿಗಳಲ್ಲೂ ಪ್ರಚಾರ ಮಾಡಿ ಅವರನ್ನು ಗೆಲ್ಲಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ. ನಮ್ಮ ಹೈಕಮಾಂಡ್ ಅದೇನು ಕ್ರಮ ತೆಗೆದುಕೊಳ್ಳುತ್ತದೆಯೋ ತೆಗೆದುಕೊಳ್ಳಲಿ. ನನಗೇನೂ ಅಭ್ಯಂತರವಿಲ್ಲ’ ಎಂದು ಸವಾಲು ಹಾಕಿದರು.</p>.<p>‘ಸುರೇಶ ಅಂಗಡಿ ಕುಟುಂಬದವರು ಸ್ಪರ್ಧಿಸಿದರೆ ಪಕ್ಷ ನೋಡುವುದಿಲ್ಲ. ನನ್ನ ಮಗನ ಚುನಾವಣೆ ಹೇಗೆ ಮಾಡಿದ್ದೇನೆಯೋ ಅದೇ ರೀತಿ ಅವರಿಗೂ ನೆರವಾಗುತ್ತೇನೆ’ ಎಂದರು.</p>.<p>‘ಪಕ್ಷ ಬೇರೆ ಬೇರೆಯಾಗಿದ್ದರೂ ನಾನು ಮತ್ತು ಸುರೇಶ ಅಂಗಡಿ ಆತ್ಮೀಯ ಸ್ನೇಹಿತರಾಗಿದ್ದೆವು. ಅವರು ನಮ್ಮೊಂದಿಗೆ ಇಲ್ಲದಿರುವುದು ದುಃಖದ ಸಂಗತಿ’ ಎಂದು ತಿಳಿಸಿದರು.</p>.<p><strong>ಇದನ್ನೂ ಓದಿ... <a href="https://www.prajavani.net/district/kalaburagi/karnataka-politics-siddaramaiah-talked-about-dcm-cn-ashwath-narayan-bjp-congress-773822.html" target="_blank">ಧಮ್ ಇದ್ದರೆ ಪ್ರಧಾನಿ ಮುಂದೆ ಕೂತು ಪರಿಹಾರ ತರಲಿ: ಸಿದ್ದರಾಮಯ್ಯ ಸವಾಲು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ದಿ.ಸುರೇಶ ಅಂಗಡಿ ಅವರ ಕುಟುಂಬದವರಿಗೆ ಯಾರಿಗೇ ಟಿಕೆಟ್ ನೀಡಿದರೂ ಅವರನ್ನು ಗೆಲ್ಲಿಸುವುದಕ್ಕಾಗಿ ಶ್ರಮಿಸುತ್ತೇನೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಚಿಕ್ಕೋಡಿ ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಹೇಳಿದರು.</p>.<p>ಜಿಲ್ಲೆಯ ಚಿಕ್ಕೋಡಿಯಲ್ಲಿ ಭಾನುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಹಳ್ಳಿ ಹಳ್ಳಿಗಳಲ್ಲೂ ಪ್ರಚಾರ ಮಾಡಿ ಅವರನ್ನು ಗೆಲ್ಲಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ. ನಮ್ಮ ಹೈಕಮಾಂಡ್ ಅದೇನು ಕ್ರಮ ತೆಗೆದುಕೊಳ್ಳುತ್ತದೆಯೋ ತೆಗೆದುಕೊಳ್ಳಲಿ. ನನಗೇನೂ ಅಭ್ಯಂತರವಿಲ್ಲ’ ಎಂದು ಸವಾಲು ಹಾಕಿದರು.</p>.<p>‘ಸುರೇಶ ಅಂಗಡಿ ಕುಟುಂಬದವರು ಸ್ಪರ್ಧಿಸಿದರೆ ಪಕ್ಷ ನೋಡುವುದಿಲ್ಲ. ನನ್ನ ಮಗನ ಚುನಾವಣೆ ಹೇಗೆ ಮಾಡಿದ್ದೇನೆಯೋ ಅದೇ ರೀತಿ ಅವರಿಗೂ ನೆರವಾಗುತ್ತೇನೆ’ ಎಂದರು.</p>.<p>‘ಪಕ್ಷ ಬೇರೆ ಬೇರೆಯಾಗಿದ್ದರೂ ನಾನು ಮತ್ತು ಸುರೇಶ ಅಂಗಡಿ ಆತ್ಮೀಯ ಸ್ನೇಹಿತರಾಗಿದ್ದೆವು. ಅವರು ನಮ್ಮೊಂದಿಗೆ ಇಲ್ಲದಿರುವುದು ದುಃಖದ ಸಂಗತಿ’ ಎಂದು ತಿಳಿಸಿದರು.</p>.<p><strong>ಇದನ್ನೂ ಓದಿ... <a href="https://www.prajavani.net/district/kalaburagi/karnataka-politics-siddaramaiah-talked-about-dcm-cn-ashwath-narayan-bjp-congress-773822.html" target="_blank">ಧಮ್ ಇದ್ದರೆ ಪ್ರಧಾನಿ ಮುಂದೆ ಕೂತು ಪರಿಹಾರ ತರಲಿ: ಸಿದ್ದರಾಮಯ್ಯ ಸವಾಲು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>