‘ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ಗೋವಾ, ತಮಿಳುನಾಡು, ಕೇರಳದಿಂದ 1 ಕೋಟಿ ವಾಹನಗಳು ಪ್ರತಿವರ್ಷ ಈ ಕ್ಷೇತ್ರಕ್ಕೆ ಹೋಗುತ್ತವೆ. ಕೇರಳ ಸರ್ಕಾರ ಪ್ರತಿ ವಾಹನದಿಂದ ₹40 ವಸೂಲಿ ಮಾಡುತ್ತದೆ. ಅಲ್ಲಿನ ಸರ್ಕಾರವು ದೇವಸ್ಥಾನ ಸಮಿತಿ ಮೇಲೆ ಒತ್ತಡ ಹೇರಿ, ಸೌಲಭ್ಯ ಕಲ್ಪಿಸುತ್ತಿಲ್ಲ. ಶಬರಿಮಲೈಗೆ ಹೋಗುವ ಭಕ್ತರಿಗೆ ಕರ್ನಾಟಕ ಸರ್ಕಾರವೂ ಸೌಲಭ್ಯ ಕಲ್ಪಿಸಬೇಕು’ ಎಂದು ಅವರು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.