‘ಸರ್ಕಾರದ ನಿರ್ಧಾರವನ್ನು ಶ್ರೀರಾಮ ಸೇನೆ ಸಂಘಟನೆ ವಿರೋಧಿಸುತ್ತದೆ. ಈ ಆದೇಶವನ್ನು ಕೂಡಲೇ ವಾಪಸ್ ತೆಗೆದುಕೊಳ್ಳಬೇಕು. ತೆಲಂಗಾಣ, ಮಹಾರಾಷ್ಟ್ರ ಸರ್ಕಾರಗಳು ಆರು ತಿಂಗಳ ಮೊದಲೇ ಈ ಬಗ್ಗೆ ಸ್ಪಷ್ಟಪಡಿಸಿವೆ. ಆದರೆ, ಇಲ್ಲಿನ ಸರ್ಕಾರ ಕಡಿಮೆ ಅವಧಿಯಲ್ಲಿ ಆದೇಶ ಹೊರಡಿಸಿದೆ. ಹಿಂದೂ ದೇವಸ್ಥಾನ ಮತ್ತು ಜಾತ್ರೆಗಳಿಗೆ ಮಾತ್ರ ನಿರ್ಬಂಧ ಹಾಕುತ್ತಿರುವುದೇಕೆ? ಇತರ ಆಚರಣೆಗೆ ನಿರ್ಬಂಧ ವಿಧಿಸಿಲ್ಲ. ಶಾಲಾ– ಕಾಲೇಜು ಆರಂಭಕ್ಕೆ ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ. ಹಿಂದೂಗಳ ಆಚರಣೆಗೇಕೆ ನಿರ್ಬಂಧ ಹಾಕುತ್ತಿದೆ?’ ಎಂದು ಕೇಳಿದರು.