'ತಮ್ಮ ಹಿಂದಿನಿಂದಲೂ ಗುತ್ತಿಗೆ ಮಾಡುತ್ತಿದ್ದ. ₹ 4 ಕೋಟಿ ಮೊತ್ತದ ಕೆಲಸ ಮಾಡಿದ್ದೇನೆ. ಹಣ ಬಂದಿಲ್ಲ, ಬಹಳ ಕಷ್ಟವಾಗಿದೆ ಎಂದು ಹೇಳಿದ್ದ. ಅವರ ವಿರುದ್ಧ ಮಾನನಷ್ಟ ಮೊಕದ್ದಮೆಯೂ ದಾಖಲಾಗಿತ್ತು. ಜೀವ ಬೆದರಿಕೆಯೂ ಇದೆ ಎಂದಿದ್ದ. ಅವರ ಸಾವಿಗೆ ನ್ಯಾಯ ದೊರಕಿಸಿಕೊಡಬೇಕು. ನಮ್ಮ ಸಮುದಾಯದವರೇ ಆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಾಸಕ ಬಿ.ಎಸ್. ಯಡಿಯೂರಪ್ಪ ಅವರು ನಮಗೆ ನ್ಯಾಯ ದೊರಕಿಸಿಕೊಡಬೇಕು' ಎಂದು ಒತ್ತಾಯಿಸಿದರು.