ಬೈಲಹೊಂಗಲ: ಸಮೀಪದ ಮುರಗೋಡ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಪ್ರೌಢಶಾಲೆ ಆವರಣದಲ್ಲಿ ಡಿ.19ರಂದು ಸಂಜೆ 5ಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಮುರಗೋಡ ಘಟಕ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಹಾಗೂ ಶಿವಚಿದಂಬರೇಶ್ವರ ಮಠದ ಜಾತ್ರಾ ಮಹೋತ್ಸವ ಅಂಗವಾಗಿ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ, ಸಾಧಕರಿಗೆ, ಸಚಿವರಿಗೆ, ಶಾಸಕರಿಗೆ ಸನ್ಮಾನ, ರಸಮಂಜರಿ ಹಾಗೂ ನಗೆ ಹಬ್ಬ ಕಾರ್ಯಕ್ರಮ ನಡೆಯಲಿದೆ.