ತಾಲ್ಲೂಕಿನ ಕಡತನಾಳ ಗ್ರಾಮದ ರತ್ನವ್ವ ಕಾದ್ರೊಳ್ಳಿ ಅವರನ್ನು ಗುರುವಾರ ಹೆರಿಗೆಗೆ ಆರೋಗ್ಯ ಕೇಂದ್ರಕ್ಕೆ ತರಲಾಗಿತ್ತು. ಆದರೆ ಅಲ್ಲಿ ವೈದ್ಯರು, ನರ್ಸ್ ಸೇರಿದಂತೆ ಯಾರೂ ಇರಲಿಲ್ಲ. ಎರಡು ತಾಸು ಆಸ್ಪತ್ರೆಯ ಆವರಣದಲ್ಲೇ ಗರ್ಭಿಣಿ ತೀವ್ರ ನರಳಾಡಿದರು. ಹೆರಿಗೆ ನೋವಿನಿಂದ ಇನ್ನಿಲ್ಲದಂತೆ ಪರದಾಡಿದರು. ಕೊನೆಗೂ ವೈದ್ಯರಾಗಲೀ, ನರ್ಸ್ ಆಗಲೀ ಬರಲಿಲ್ಲ. ಕೆಲವರು ಬೈಲಹೊಂಗಲದ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿ ಸುರಕ್ಷಿತ ಹೆರಿಗೆ ಮಾಡಿಸಿದರು.