ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸರ್ವರಿಗೂ ಸಂವಿಧಾನ’ ನಾಟಕಕ್ಕೆ ಸಿದ್ಧತೆ

Last Updated 3 ಜುಲೈ 2021, 15:51 IST
ಅಕ್ಷರ ಗಾತ್ರ

ಎಂ.ಕೆ. ಹುಬ್ಬಳ್ಳಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಧಾರವಾಡ ರಂಗಾಯಣ ವತಿಯಿಂದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ನಿರ್ಮಿಸುತ್ತಿರುವ ‘ಸರ್ವರಿಗೂ ಸಂವಿಧಾನ’ ಹಾಗೂ ಕೊರೊನಾ ಜಾಗೃತಿಗೆ ನಾಟಕಗಳ ಸಿದ್ಧತಾ ಶಿಬಿರ ಸಮೀಪದ ಅನುಭವ ಮಂಟಪದ ಮಂಗಲ ಕಾರ್ಯಾಲಯದಲ್ಲಿ ನಡೆಯುತ್ತಿದೆ.

‘ಮಾನವೀಯತೆಯುಸಂವಿಧಾನದ ಮೂಲ ಮಂತ್ರವಾಗಿದೆ. ಸಂವಿಧಾನವೆಂದರೆ ವಿಧಿ ಹಾಗೂ ಉಪವಿಧಿಗಳ ಲೆಕ್ಕವಲ್ಲ. ರಾಜ್ಯಾಧಿಕಾರದ ನೀತಿ ನಿರೂಪಣೆಯೊಂದಿಗೆ ಸಂವಿಧಾನವು ಐತಿಹಾಸಿಕವಾಗಿ ತುಳಿತಕ್ಕೆ ಒಳಗಾದವರಿಗೆ ನ್ಯಾಯ ಒದಗಿಸುವ ಕೆಲಸ ಮಾಡಿದೆ. ಪ್ರಜಾಪ್ರಭುತ್ವದ ಮೂಲ ಆಶಯದಂತೆ ರಾಜ್ಯಾಧಿಕಾರದಲ್ಲಿ ಎಲ್ಲಾ ವರ್ಗದವರಿಗೂ ಪ್ರಾತಿನಿಧ್ಯವನ್ನು ಸಂವಿಧಾನದ ಮೂಲಕ ಜಾರಿಗೆ ತರಲಾಗಿದೆ. ದೇಶದ ಎಲ್ಲಾ ಜನರ ಆಶಯವನ್ನು ಪ್ರತಿನಿಧಿಸುವ ಪವಿತ್ರ ಗ್ರಂಥವಾಗಿದೆ. ಜನಸಾಮಾನ್ಯರಿಗೆ ಸಂವಿಧಾನದತ್ತ ಅವಕಾಶಗಳನ್ನು ಮನದಟ್ಟು ಮಾಡಿಸುವ ರೀತಿಯಲ್ಲಿ ನಾಟಕ ರೂಪಿಸಲು ಶ್ರಮಿಸಲಾಗುತ್ತಿದೆ’ ಎಂದು ನಾಟಕದ ನಿರ್ದೇಶಕ ಬಾಬಾಸಾಹೇಬ ಕಾಂಬ್ಳೆ ಹೇಳಿದರು.

ರಂಗಾಯಣದ ರೆಪರ್ಟರಿ ಕಲಾವಿದರು ಕೊರೊನಾ ಜಾಗೃತಿಗಾಗಿ ಸಿದ್ಧಪಡಿಸುತ್ತಿರುವ ನಾಟಕ ಮಲ್ಲಪ್ಪ ಹೊಂಗಲ್ (ಮೊಬೈಲ್ ಮಲ್ಲ) ಅವರ ನಿರ್ದೇಶನದಲ್ಲಿ ತಯಾರಾಗುತ್ತಿದೆ.

ರಂಗಾಯಣ ನಿರ್ದೇಶಕ ರಮೇಶ ಪರವಿನಾಯ್ಕರ, ಆಡಳಿತಾಧಿಕಾರಿ ಮಂಜುನಾಥ ಡೊಳ್ಳಿನ ಇದ್ದರು.

40 ಕಲಾವಿದರು ತರಬೇತಿ ಪಡೆಯುತ್ತಿದ್ದಾರೆ. ಯೋಗಾಭ್ಯಾಸ, ಸಂಗೀತ ಮತ್ತಿತರ ಪೂರಕ ಚಟುವಟಿಕೆಗಳು ಕೂಡ ನಡೆಯುತ್ತಿವೆ. ಜುಲೈ ಅಂತ್ಯದವರೆಗೆ ಶಿಬಿರ ಇರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT