<p><strong>ಕೌಜಲಗಿ:</strong> ‘ಕೇಂದ್ರ ಸರ್ಕಾರದ ‘ಸ್ವಾಮಿತ್ವ’ ಯೋಜನೆಗೆ ಗೋಕಾಕ ಹಾಗೂ ಮೂಡಲಗಿ ತಾಲ್ಲೂಕಿನ ಆಯ್ದ ಗ್ರಾಮಗಳಲ್ಲಿ ಶೀಘ್ರದಲ್ಲಿಯೇ ಚಾಲನೆ ದೊರೆಯಲಿದೆ’ ಎಂದು ಭೂದಾಖಲೆಗಳ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯ ಸರ್ವೆ ಸೂಪರ್ವೈಸರ್ ಬಿ.ವೈ. ಉಪ್ಪಾರ ತಿಳಿಸಿದರು.</p>.<p>ಸೋಮವಾರ ಸಮೀಪದ ಢವಳೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಳಿಮಟ್ಟಿ, ಢವಳೇಶ್ವರ ಹಾಗೂ ಮನ್ನಾಪೂರ ಗ್ರಾಮದಲ್ಲಿ ನಡೆದ ಗ್ರಾಮ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಗ್ರಾಮೀಣ ಜನರು ಆಸ್ತಿ ದಾಖಲೆಗಳನ್ನು ಪಡೆಯಲು ಯೋಜನೆಯು ಸಹಕಾರಿಯಾಗಿದೆ. ಆಸ್ತಿಯ ವಿಸ್ತೀರ್ಣ, ಸೀಮೆಯನ್ನು ಗುರುತಿಸಿಕೊಳ್ಳಬಹುದಾಗಿದೆ. ಆಧುನಿಕ ತಂತ್ರಜ್ಞಾನ ಬಳಸಿ, ಡ್ರೋಣ್ ಆಧಾರಿತ ಸಮೀಕ್ಷೆ ಕೈಗೊಳ್ಳಲಾಗುವುದು. ಗ್ರಾಮಗಳ ಆಸ್ತಿಯನ್ನು ಬಿಳಿ ಬಣ್ಣದಿಂದ ಗುರುತಿಸಲಾಗುವುದು’ ಎಂದು ಮಾಹಿತಿ ನೀಡಿದರು.</p>.<p>‘ಮೂಡಲಗಿ ತಾಲ್ಲೂಕಿನ ಅರಳಿಮಟ್ಟಿ, ಢವಳೇಶ್ವರ ಹಾಗೂ ಮನ್ನಾಪೂರ ಗ್ರಾಮಗಳು ಹಾಗೂ ಗೋಕಾಕ ತಾಲ್ಲೂಕಿನ ಶಿಲ್ತಿಭಾಂವಿ, ಪುಡಕಲಕಟ್ಟಿ, ಜಮನಾಳ ಗ್ರಾಮಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ’ ಎಂದರು.</p>.<p>ಸರ್ವೆ ಸೂಪರ್ವೈಸರ್ ಎಂ.ಆರ್. ಭೋವಿ, ಸರ್ವೆ ಅಧಿಕಾರಿಗಳಾದ ವೀರೇಶ ಮೇಟಿ, ಎಂ.ಎಚ್. ಸಿಂದಗಿ, ಗಣೇಶ ದೇವಾಡಿಗ, ಪ್ರಕಾಶ ಕಾಳಗಿ, ಶಂಕರ ಪಿಡಶೆಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೌಜಲಗಿ:</strong> ‘ಕೇಂದ್ರ ಸರ್ಕಾರದ ‘ಸ್ವಾಮಿತ್ವ’ ಯೋಜನೆಗೆ ಗೋಕಾಕ ಹಾಗೂ ಮೂಡಲಗಿ ತಾಲ್ಲೂಕಿನ ಆಯ್ದ ಗ್ರಾಮಗಳಲ್ಲಿ ಶೀಘ್ರದಲ್ಲಿಯೇ ಚಾಲನೆ ದೊರೆಯಲಿದೆ’ ಎಂದು ಭೂದಾಖಲೆಗಳ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯ ಸರ್ವೆ ಸೂಪರ್ವೈಸರ್ ಬಿ.ವೈ. ಉಪ್ಪಾರ ತಿಳಿಸಿದರು.</p>.<p>ಸೋಮವಾರ ಸಮೀಪದ ಢವಳೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಳಿಮಟ್ಟಿ, ಢವಳೇಶ್ವರ ಹಾಗೂ ಮನ್ನಾಪೂರ ಗ್ರಾಮದಲ್ಲಿ ನಡೆದ ಗ್ರಾಮ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಗ್ರಾಮೀಣ ಜನರು ಆಸ್ತಿ ದಾಖಲೆಗಳನ್ನು ಪಡೆಯಲು ಯೋಜನೆಯು ಸಹಕಾರಿಯಾಗಿದೆ. ಆಸ್ತಿಯ ವಿಸ್ತೀರ್ಣ, ಸೀಮೆಯನ್ನು ಗುರುತಿಸಿಕೊಳ್ಳಬಹುದಾಗಿದೆ. ಆಧುನಿಕ ತಂತ್ರಜ್ಞಾನ ಬಳಸಿ, ಡ್ರೋಣ್ ಆಧಾರಿತ ಸಮೀಕ್ಷೆ ಕೈಗೊಳ್ಳಲಾಗುವುದು. ಗ್ರಾಮಗಳ ಆಸ್ತಿಯನ್ನು ಬಿಳಿ ಬಣ್ಣದಿಂದ ಗುರುತಿಸಲಾಗುವುದು’ ಎಂದು ಮಾಹಿತಿ ನೀಡಿದರು.</p>.<p>‘ಮೂಡಲಗಿ ತಾಲ್ಲೂಕಿನ ಅರಳಿಮಟ್ಟಿ, ಢವಳೇಶ್ವರ ಹಾಗೂ ಮನ್ನಾಪೂರ ಗ್ರಾಮಗಳು ಹಾಗೂ ಗೋಕಾಕ ತಾಲ್ಲೂಕಿನ ಶಿಲ್ತಿಭಾಂವಿ, ಪುಡಕಲಕಟ್ಟಿ, ಜಮನಾಳ ಗ್ರಾಮಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ’ ಎಂದರು.</p>.<p>ಸರ್ವೆ ಸೂಪರ್ವೈಸರ್ ಎಂ.ಆರ್. ಭೋವಿ, ಸರ್ವೆ ಅಧಿಕಾರಿಗಳಾದ ವೀರೇಶ ಮೇಟಿ, ಎಂ.ಎಚ್. ಸಿಂದಗಿ, ಗಣೇಶ ದೇವಾಡಿಗ, ಪ್ರಕಾಶ ಕಾಳಗಿ, ಶಂಕರ ಪಿಡಶೆಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>