<p><strong>ಹುಬ್ಬಳ್ಳಿ:</strong> ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡುವ ವೇಳೆ ಚಕ್ಕಡಿ ಮೇಲಿಂದ ಬಿದ್ದು ಸಾವಿಗೀಡಾದ ಧಾರವಾಡ ಗ್ರಾಮೀಣ ಜಿಲ್ಲಾ ಅಧ್ಯಕ್ಷ ಎಚ್.ವಿ. ಮಾಡಳ್ಳಿ ಅವರ ಹಳ್ಳಿಕೇರಿ ಮನೆಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.</p>.<p>ಅಣ್ಣಿಗೇರಿ ತಾಲ್ಲೂಕಿನ ಹಳ್ಳಿಕೇರಿ ಗ್ರಾಮಕ್ಕೆ ರಾಹುಲ್ ಭೇಟಿ ನೀಡಿದ ವೇಳೆ ಎಐಸಿಸಿ ಕರ್ನಾಟಕ ಉಸ್ತುವಾರಿಕೆ ಕೆ.ಸಿ. ವೇಣುಗೋಪಾಲ್, ಸಚಿವ ಎಚ್.ಕೆ. ಪಾಟೀಲ, ಮಾಜಿ ಶಾಸಕ ಡಿ.ಆರ್. ಪಾಟೀಲ, ಪಕ್ಷದ ಮುಖಂಡ ವೀರಣ್ಣ ಮತ್ತಿಕಟ್ಟಿ ಇದ್ದರು.</p>.<p>ಮಾಡಳ್ಳಿ ಪುತ್ರ ವೆಂಕಟೇಶ್ ಅವರೊಂದಿಗೆ ಮಾತನಾಡಿದ ರಾಹುಲ್, ನಿಮ್ಮ ತಂದೆ ಶಿಸ್ತಿನ ಸಿಪಾಯಿಯಂತೆ ಪಕ್ಷಕ್ಕೆ ದುಡಿದಿದ್ದಾರೆ. ಅವರ ಸಾವು ಪಕ್ಷಕ್ಕೆ ಅಪಾರ ನಷ್ಟ ಉಂಟು ಮಾಡಿದೆ ಎಂದರು.</p>.<p>ಪಕ್ಷದಲ್ಲಿ ಕುಟುಂಬದವರಿಗೆ ಉತ್ತಮ ಸ್ಥಾನ ನೀಡಲಾಗುವುದು ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡುವ ವೇಳೆ ಚಕ್ಕಡಿ ಮೇಲಿಂದ ಬಿದ್ದು ಸಾವಿಗೀಡಾದ ಧಾರವಾಡ ಗ್ರಾಮೀಣ ಜಿಲ್ಲಾ ಅಧ್ಯಕ್ಷ ಎಚ್.ವಿ. ಮಾಡಳ್ಳಿ ಅವರ ಹಳ್ಳಿಕೇರಿ ಮನೆಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.</p>.<p>ಅಣ್ಣಿಗೇರಿ ತಾಲ್ಲೂಕಿನ ಹಳ್ಳಿಕೇರಿ ಗ್ರಾಮಕ್ಕೆ ರಾಹುಲ್ ಭೇಟಿ ನೀಡಿದ ವೇಳೆ ಎಐಸಿಸಿ ಕರ್ನಾಟಕ ಉಸ್ತುವಾರಿಕೆ ಕೆ.ಸಿ. ವೇಣುಗೋಪಾಲ್, ಸಚಿವ ಎಚ್.ಕೆ. ಪಾಟೀಲ, ಮಾಜಿ ಶಾಸಕ ಡಿ.ಆರ್. ಪಾಟೀಲ, ಪಕ್ಷದ ಮುಖಂಡ ವೀರಣ್ಣ ಮತ್ತಿಕಟ್ಟಿ ಇದ್ದರು.</p>.<p>ಮಾಡಳ್ಳಿ ಪುತ್ರ ವೆಂಕಟೇಶ್ ಅವರೊಂದಿಗೆ ಮಾತನಾಡಿದ ರಾಹುಲ್, ನಿಮ್ಮ ತಂದೆ ಶಿಸ್ತಿನ ಸಿಪಾಯಿಯಂತೆ ಪಕ್ಷಕ್ಕೆ ದುಡಿದಿದ್ದಾರೆ. ಅವರ ಸಾವು ಪಕ್ಷಕ್ಕೆ ಅಪಾರ ನಷ್ಟ ಉಂಟು ಮಾಡಿದೆ ಎಂದರು.</p>.<p>ಪಕ್ಷದಲ್ಲಿ ಕುಟುಂಬದವರಿಗೆ ಉತ್ತಮ ಸ್ಥಾನ ನೀಡಲಾಗುವುದು ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>