‘ಬೈಲಹೊಂಗಲ ಉಪವಿಭಾಗದಲ್ಲಿ ಬರುವ ಬೈಲಹೊಂಗಲ, ಕಿತ್ತೂರ, ಮೂಡಲಗಿ, ಉಮದುರ್ಗ, ಸವದತ್ತಿ ಹಾಗೂ ಗೋಕಾಕ 6 ತಾಲ್ಲೂಕುಗಳ ಪೈಕಿ 2020-21ನೇ ಸಾಲಿನಲ್ಲಿ ಒಟ್ಟು 133 ಎ ವರ್ಗದ, 17 ಬಿ ವರ್ಗದ ಹಾಗೂ 12.30 ಸಿ ವರ್ಗದ ಹೀಗೆ ಒಟ್ಟು 1,480 ಮನೆಗಳ ಹಾನಿಯಾಗಿದ್ದು, ಅವುಗಳ ಪೈಕಿ ಶೇ 70 ರಷ್ಟು ಹಾನಿ ಸರ್ವೇ ಕಾರ್ಯ ಮುಕ್ತಾಯಗೊಂಡಿದೆ. ಇನ್ನುಳಿದ ಶೇ 30 ರಷ್ಟು ಸರ್ವೇ ಕಾರ್ಯ ಪ್ರಗತಿಯಲ್ಲಿದೆ. ಜೀವಹಾನಿ, ಜಾನುವಾರು ಹಾನಿ, ಬೆಳೆ ಹಾನಿಯನ್ನು ಪರಿಶೀಲಿಸಿ ತಿಂಗಳಾಂತ್ಯದಲ್ಲಿ ಈ ಕಾರ್ಯ ಪೂರ್ಣಗೊಳಿಸಿ' ಎಂದು ತಿಳಿಸಿದರು.