<p><strong>ಗೋಕಾಕ (ಬೆಳಗಾವಿ ಜಿಲ್ಲೆ): </strong>‘ಸಂಭವನೀಯ ಕೋವಿಡ್ 3ನೇ ಹಾಗೂ ಪ್ರವಾಹ ಪರಿಸ್ಥಿತಿ ನಿಭಾಯಿಸಲು ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು’ ಎಂದು ಕೆಎಂಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚಿಸಿದರು.</p>.<p>ಇಲ್ಲಿನ ತಾ.ಪಂ. ಸಭಾಂಗಣದಲ್ಲಿ ಶುಕ್ರವಾರ ನಡೆದ ಗೋಕಾಕ ಹಾಗೂ ಮೂಡಲಗಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಜುಲೈ ಕೊನೆಯಿಂದ ಆಗಸ್ಟ್ ಅಂತ್ಯದವರೆಗೆ ಪ್ರವಾಹ ಭೀತಿ ಎದುರಾಗುವ ಸಾಧ್ಯತೆ ಇದೆ. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು. ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು. ಅವಘಡಗಳಿಗೆ ಅವಕಾಶ ಕೊಡಬಾರದು’ ಎಂದು ನಿರ್ದೇಶನ ನೀಡಿದರು.</p>.<p>‘ನೆರೆಯ ಮಹಾರಾಷ್ಟ್ರ, ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಸಂಭವನೀಯ ಕೊರೊನಾ ಮೂರನೇ ಅಲೆ ಹರಡುತ್ತಿರುವ ಕುರಿತು ವರದಿಯಾಗುತ್ತಿದೆ. ಗೋಕಾಕ ಮತ್ತು ಮೂಡಲಗಿ ತಾಲ್ಲೂಕುಗಳಾದ್ಯಂತ ಅಂತಹ ಅಲೆ ಪಸರಿಸದಂತೆ ತಡೆಯಲು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಬೇಕು’ ಎಂದು ತಿಳಿಸಿದರು.</p>.<p>‘ನಗರದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪನೆಗೆ ಕ್ರಮ ಜರುಗಿಸಲಾಗಿದೆ. ಇಷ್ಟರಲ್ಲೇ ಇನ್ನೊಂದು ಘಟಕ ಮಂಜೂರಾಗಲಿದೆ. ಏಕ ಕಾಲಕ್ಕೆ 200 ರೋಗಿಗಳಿಗೆ ಆಮ್ಲಜನಕ ಪೂರೈಕೆಯೊಂದಿಗೆ ಚಿಕಿತ್ಸೆ ನೀಡಬಹುದಾಗಿದೆ ಎಂದು ವಿವರಿಸಿದರು.</p>.<p>‘ಶಾಸಕರ ನಿಧಿಯಿಂದ ಗೋಕಾಕ ಮತ್ತು ಮೂಡಲಗಿ ತಾಲ್ಲೂಕುಗಳಿಗೆ ಅಗತ್ಯ ಆಂಬ್ಯುಲೆನ್ಸ್ಗಳ ವ್ಯವಸ್ಥೆ ಮಾಡಲಾಗಿದೆ. ತುರ್ತು ಚಿಕಿತ್ಸೆ ನೀಡಲು ಅವುಗಳಲ್ಲಿ ಆಮ್ಲಜನಕ ಯಂತ್ರ ವ್ಯವಸ್ಥೆಯನ್ನೂ ಕಲ್ಪಿಸಲಾಗುತ್ತಿದೆ. ಅಲೆ ಎದುರಿಸಲು ಆರೋಗ್ಯ ಇಲಾಖೆ ಸಮಗ್ರವಾಗಿ ಸನ್ನದ್ಧವಾಗಬೇಕು’ ಎಂದು ತಿಳಿಸಿದರು.</p>.<p>ಟಿಎಚ್ಒ ಡಾ.ಮುತ್ತಣ್ಣ ಕೊಪ್ಪದ, ಡಾ.ಆರ್.ಎಸ್. ಬೆಣಚಿನಮರಡಿ, ಗೋಕಾಕ ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ, ಮೂಡಲಗಿ ತಹಶೀಲ್ದಾರ್ ಡಿ.ಜಿ. ಮಹಾತ್, ಎಸ್.ಐ. ನಾಗರಾಜ ಖಿಲಾರೆ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಕಾಕ (ಬೆಳಗಾವಿ ಜಿಲ್ಲೆ): </strong>‘ಸಂಭವನೀಯ ಕೋವಿಡ್ 3ನೇ ಹಾಗೂ ಪ್ರವಾಹ ಪರಿಸ್ಥಿತಿ ನಿಭಾಯಿಸಲು ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು’ ಎಂದು ಕೆಎಂಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚಿಸಿದರು.</p>.<p>ಇಲ್ಲಿನ ತಾ.ಪಂ. ಸಭಾಂಗಣದಲ್ಲಿ ಶುಕ್ರವಾರ ನಡೆದ ಗೋಕಾಕ ಹಾಗೂ ಮೂಡಲಗಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಜುಲೈ ಕೊನೆಯಿಂದ ಆಗಸ್ಟ್ ಅಂತ್ಯದವರೆಗೆ ಪ್ರವಾಹ ಭೀತಿ ಎದುರಾಗುವ ಸಾಧ್ಯತೆ ಇದೆ. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು. ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು. ಅವಘಡಗಳಿಗೆ ಅವಕಾಶ ಕೊಡಬಾರದು’ ಎಂದು ನಿರ್ದೇಶನ ನೀಡಿದರು.</p>.<p>‘ನೆರೆಯ ಮಹಾರಾಷ್ಟ್ರ, ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಸಂಭವನೀಯ ಕೊರೊನಾ ಮೂರನೇ ಅಲೆ ಹರಡುತ್ತಿರುವ ಕುರಿತು ವರದಿಯಾಗುತ್ತಿದೆ. ಗೋಕಾಕ ಮತ್ತು ಮೂಡಲಗಿ ತಾಲ್ಲೂಕುಗಳಾದ್ಯಂತ ಅಂತಹ ಅಲೆ ಪಸರಿಸದಂತೆ ತಡೆಯಲು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಬೇಕು’ ಎಂದು ತಿಳಿಸಿದರು.</p>.<p>‘ನಗರದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪನೆಗೆ ಕ್ರಮ ಜರುಗಿಸಲಾಗಿದೆ. ಇಷ್ಟರಲ್ಲೇ ಇನ್ನೊಂದು ಘಟಕ ಮಂಜೂರಾಗಲಿದೆ. ಏಕ ಕಾಲಕ್ಕೆ 200 ರೋಗಿಗಳಿಗೆ ಆಮ್ಲಜನಕ ಪೂರೈಕೆಯೊಂದಿಗೆ ಚಿಕಿತ್ಸೆ ನೀಡಬಹುದಾಗಿದೆ ಎಂದು ವಿವರಿಸಿದರು.</p>.<p>‘ಶಾಸಕರ ನಿಧಿಯಿಂದ ಗೋಕಾಕ ಮತ್ತು ಮೂಡಲಗಿ ತಾಲ್ಲೂಕುಗಳಿಗೆ ಅಗತ್ಯ ಆಂಬ್ಯುಲೆನ್ಸ್ಗಳ ವ್ಯವಸ್ಥೆ ಮಾಡಲಾಗಿದೆ. ತುರ್ತು ಚಿಕಿತ್ಸೆ ನೀಡಲು ಅವುಗಳಲ್ಲಿ ಆಮ್ಲಜನಕ ಯಂತ್ರ ವ್ಯವಸ್ಥೆಯನ್ನೂ ಕಲ್ಪಿಸಲಾಗುತ್ತಿದೆ. ಅಲೆ ಎದುರಿಸಲು ಆರೋಗ್ಯ ಇಲಾಖೆ ಸಮಗ್ರವಾಗಿ ಸನ್ನದ್ಧವಾಗಬೇಕು’ ಎಂದು ತಿಳಿಸಿದರು.</p>.<p>ಟಿಎಚ್ಒ ಡಾ.ಮುತ್ತಣ್ಣ ಕೊಪ್ಪದ, ಡಾ.ಆರ್.ಎಸ್. ಬೆಣಚಿನಮರಡಿ, ಗೋಕಾಕ ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ, ಮೂಡಲಗಿ ತಹಶೀಲ್ದಾರ್ ಡಿ.ಜಿ. ಮಹಾತ್, ಎಸ್.ಐ. ನಾಗರಾಜ ಖಿಲಾರೆ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>