ಮಹದಾಯಿ ಕಾಮಗಾರಿಗೆ ಪ್ರಧಾನಿ ಏಕೆ ಚಾಲನೆ ನೀಡುತ್ತಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಮಹದಾಯಿ ವಿಚಾರದಲ್ಲಿ ಯಾರೂ ಆತಂಕ ಪಡಬೇಕಾಗಿಲ್ಲ. ಪ್ರಾಧಿಕಾರ ರಚನೆಗೆ ಕೇಂದ್ರ ಒಪ್ಪಿಗೆ ನೀಡಿದೆ. ಅದರಲ್ಲಿ ಕರ್ನಾಟಕ, ಮಹಾರಾಷ್ಟ್ರ, ಗೋವಾ ಹಾಗೂ ಕೇಂದ್ರದ ಪ್ರತಿನಿಧಿಗಳೂ ಇರುತ್ತಾರೆ. ನಿರೀಕ್ಷಿತ ಸಮಯಕ್ಕೆ ಕಾಮಗಾರಿ ಮಾಡುತ್ತೇವೆ. ಈ ಯೋಜನೆಯಿಂದ ಮುಳುಗಡೆಯಾಗುವ ಅರಣ್ಯ ಪ್ರದೇಶಕ್ಕೆ ಬದಲಾಗಿ, ಜಿಲ್ಲೆಯ ಅಥಣಿ ಬಳಿ ಭೂಮಿ ನೀಡಲಾಗುತ್ತಿದೆ’ ಎಂದರು.