<p><strong>ಅಥಣಿ</strong>: ಮಾಧ್ಯಮ ಕ್ಷೇತ್ರದಲ್ಲಿ ತಂತ್ರಜ್ಞಾನ ಬೆಳೆದ ಕ್ರಾಂತಿಯ ಯುಗದಲ್ಲಿಯೂ ಮುದ್ರಣ ಮಾಧ್ಯಮ ತನ್ನ ಮೌಲ್ಯವನ್ನು ಕಳೆದುಕೊಳ್ಳದೆ ಸತ್ಯ ಮತ್ತು ವಸ್ತುನಿಷ್ಠ ವರದಿಗಳ ಮೂಲಕ ಓದುಗರ ನಂಬಿಕೆ ಉಳಿಸಿಕೊಂಡಿವೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.</p>.<p>ಪಟ್ಟಣದ ಎಸ್.ಎಸ್.ಎಂ.ಎಸ್ ಮಹಾವಿದ್ಯಾಲಯದ ಖೋತ ಸಭಾಂಗಣದಲ್ಲಿ ಅಥಣಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೋಮವಾರ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ, ಸಾಧಕರ ಸನ್ಮಾನ ಹಾಗೂ ಮುಕ್ತ ರಸಪ್ರಶ್ನೆ ಸ್ಪರ್ಧೆಯ ವಿಜೇತರ ಬಹುಮಾನ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.</p>.<p>ದೃಶ್ಯ ಮಾಧ್ಯಮಗಳ ವೈಭವೀಕರಣದ ಸುದ್ದಿ ಪ್ರಚಾರ, ಸೋಶಿಯಲ್ ಮೀಡಿಯಾ ಮತ್ತು ಯೂಟ್ಯೂಬ್ ಹಾವಳಿಯ ಮಧ್ಯೆ ನಾಡಿನ ಬಹಳಷ್ಟು ಪತ್ರಿಕೆಗಳು ತಮ್ಮ ಪತ್ರಿಕಾ ಧರ್ಮವನ್ನು ಪಾಲಿಸುವುದರ ಜೊತೆಗೆ ಓದುಗರಿಗೆ ಸತ್ಯ, ವಸ್ತುನಿಷ್ಠ ವರದಿ ಮತ್ತು ಲೇಖನಗಳನ್ನು ನೀಡುವ ಮೂಲಕ ನಂಬಿಕೆ ವಿಶ್ವಾಸ ಉಳಿಸಿಕೊಂಡಿವೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.</p>.<p>ಪತ್ರಕರ್ತರು ಸಮಾಜದ ಪ್ರತಿಬಿಂಬ, ಸರ್ಕಾರ ಮತ್ತು ಸಾರ್ವಜನಿಕರ ಮಧ್ಯದ ಸೇತುವೆ ಇದ್ದಂತೆ. ಯಾವುದೇ ಪಕ್ಷಪಾತವಿಲ್ಲದೆ ನಿರ್ಭೀತಿಯಿಂದ ಸತ್ಯವನ್ನ ಬರೆಯಬೇಕು. ಪತ್ರಕರ್ತರು ಸಾಮಾಜಿಕ ಕಳಕಳಿ, ಪ್ರಚಲಿತ ಮಾಹಿತಿ, ಕಾನೂನಿನ ಅರಿವು, ಸತ್ಯ, ನಿಷ್ಠೆ ಮತ್ತು ನೈತಿಕತೆ ಗುಣಗಳನ್ನು ಅಳವಡಿಸಿಕೊಂಡಿರಬೇಕು ಎಂದರು.</p>.<p>ಜಮಖಂಡಿಯ ಪ್ರಾಧ್ಯಾಪಕ ಯಶವಂತ ವೈ. ಕೊಕ್ಕನವರ ಅವರು ಪತ್ರಿಕೋದ್ಯಮದ ವರ್ತಮಾನದ ಸಮಸ್ಯೆ ಹಾಗೂ ಸವಾಲುಗಳ ಕುರಿತು ಉಪನ್ಯಾಸ ನೀಡಿದರು.</p>.<p>ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಾಜಿ ಶಾಸಕರಾದ ಮಹೇಶ ಕುಮಠಳ್ಳಿ, ಶಹಜಹಾನ ಡೊಂಗರಗಾಂವ ಮಾತನಾಡಿ, ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಮತ್ತು ಪತ್ರಿಕಾರಂಗ ಒಂದು ವಾಹನದ ನಾಲ್ಕು ಚಕ್ರಗಳಿದ್ದಂತೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸುಭದ್ರ ಆಡಳಿತ ನಡೆಯಬೇಕಾದರೆ ಈ ನಾಲ್ಕು ಅಂಗಗಳು ತಮ್ಮ ಕಾರ್ಯವನ್ನು ನಿಷ್ಠೆಯಿಂದ ಮಾಡುವುದು ಅಗತ್ಯವಾಗಿದೆ ಎಂದರು.</p>.<p>ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು. ಇತ್ತೀಚಿಗೆ ನಡೆದ ಮುಖ್ಯ ರಸಪ್ರಶ್ನೆ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶಾಸಕ ಲಕ್ಷ್ಮಣ ಸವದಿ ಅವರೊಂದಿಗೆ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮ ಜರುಗಿತು.</p>.<p>ಸಮಾರಂಭದ ಸಾನಿಧ್ಯ ವಹಿಸಿದ್ದ ಗಚ್ಚಿನ ಮಠದ ಶಿವ ಬಸವ ಸ್ವಾಮೀಜಿ ಮಾತನಾಡಿದರು. ಕಾ.ನಿ.ಪ ಸಂಘದ ಅಧ್ಯಕ್ಷ ಪರಶುರಾಮ ನಂದೇಶ್ವರ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಎಸ್.ಎಸ್.ಎಂ.ಎಸ್ ಕಾಲೇಜಿನ ಸ್ಥಾನಿಕ ಅಧ್ಯಕ್ಷ ಮಲ್ಲಿಕಾರ್ಜುನ ಹಂಜಿ, ಪ್ರಾಚಾರ್ಯ ಪ್ರಶಾಂತ ಮಗದುಮ್ಮ, ಸಿಪಿಐ ಸಂತೋಷ ಹಳ್ಳೂರ, ಸಮಾಜ ಸೇವಕರಾದ ಸುನಿತಾ ಐಹೊಳೆ, ಅರುಣ ಯಲಗುದ್ರಿ, ಜಯ ಕಾಂಬಳೆ, ಪ್ರಶಾಂತ ತೋಡಕರ, ಪತ್ರಕರ್ತ ಸಂಘದ ಉಪಾಧ್ಯಕ್ಷ ರಮೇಶ ಬಾದವಾಡಗಿ, ಕಾರ್ಯದರ್ಶಿ ಶಿವಕುಮಾರ ಅಪರಾಜ, ಖಜಾಂಚಿ ಅಜಿತ್ ಕಾಂಬಳೆ, ಜಿಲ್ಲಾ ಪ್ರತಿನಿಧಿ ವಿಜಯಕುಮಾರ ಅಡಹಳ್ಳಿ, ನಿಕಟ ಪೂರ್ವ ಅಧ್ಯಕ್ಷ ಅಣ್ಣಾಸಾಹೇಬ ತೆಲಸಂಗ, ರಾಜು ಗಾಲಿ, ಚಂದ್ರಶೇಖರ ತೆವರಟ್ಟಿ, ರಾಕೇಶ ಮೈಗೂರ, ಡಾ. ಆರ್.ಎಸ್. ದೊಡ್ಡನಿಂಗಪ್ಪಗೋಳ, ಸಂತೋಷ ಬಡಕಂಬಿ, ಶಿವಾನಂದ ಪೂಜಾರಿ, ಜಬ್ಬಾರ್ ಚಿಂಚಲಿ, ವಿಲಾಸ ಕಾಂಬಳೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.</p>.<p>ಶಿವಕುಮಾರ ಅಪರಾಧ ಸ್ವಾಗತಿಸಿದರು. ರಾಮಣ್ಣ ದೊಡ್ಡನಿಂಗಪ್ಪಗೋಳ ನಿರೂಪಿಸಿದರು. ವಿಜಯಕುಮಾರ ಅಡಹಳ್ಳಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಥಣಿ</strong>: ಮಾಧ್ಯಮ ಕ್ಷೇತ್ರದಲ್ಲಿ ತಂತ್ರಜ್ಞಾನ ಬೆಳೆದ ಕ್ರಾಂತಿಯ ಯುಗದಲ್ಲಿಯೂ ಮುದ್ರಣ ಮಾಧ್ಯಮ ತನ್ನ ಮೌಲ್ಯವನ್ನು ಕಳೆದುಕೊಳ್ಳದೆ ಸತ್ಯ ಮತ್ತು ವಸ್ತುನಿಷ್ಠ ವರದಿಗಳ ಮೂಲಕ ಓದುಗರ ನಂಬಿಕೆ ಉಳಿಸಿಕೊಂಡಿವೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.</p>.<p>ಪಟ್ಟಣದ ಎಸ್.ಎಸ್.ಎಂ.ಎಸ್ ಮಹಾವಿದ್ಯಾಲಯದ ಖೋತ ಸಭಾಂಗಣದಲ್ಲಿ ಅಥಣಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೋಮವಾರ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ, ಸಾಧಕರ ಸನ್ಮಾನ ಹಾಗೂ ಮುಕ್ತ ರಸಪ್ರಶ್ನೆ ಸ್ಪರ್ಧೆಯ ವಿಜೇತರ ಬಹುಮಾನ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.</p>.<p>ದೃಶ್ಯ ಮಾಧ್ಯಮಗಳ ವೈಭವೀಕರಣದ ಸುದ್ದಿ ಪ್ರಚಾರ, ಸೋಶಿಯಲ್ ಮೀಡಿಯಾ ಮತ್ತು ಯೂಟ್ಯೂಬ್ ಹಾವಳಿಯ ಮಧ್ಯೆ ನಾಡಿನ ಬಹಳಷ್ಟು ಪತ್ರಿಕೆಗಳು ತಮ್ಮ ಪತ್ರಿಕಾ ಧರ್ಮವನ್ನು ಪಾಲಿಸುವುದರ ಜೊತೆಗೆ ಓದುಗರಿಗೆ ಸತ್ಯ, ವಸ್ತುನಿಷ್ಠ ವರದಿ ಮತ್ತು ಲೇಖನಗಳನ್ನು ನೀಡುವ ಮೂಲಕ ನಂಬಿಕೆ ವಿಶ್ವಾಸ ಉಳಿಸಿಕೊಂಡಿವೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.</p>.<p>ಪತ್ರಕರ್ತರು ಸಮಾಜದ ಪ್ರತಿಬಿಂಬ, ಸರ್ಕಾರ ಮತ್ತು ಸಾರ್ವಜನಿಕರ ಮಧ್ಯದ ಸೇತುವೆ ಇದ್ದಂತೆ. ಯಾವುದೇ ಪಕ್ಷಪಾತವಿಲ್ಲದೆ ನಿರ್ಭೀತಿಯಿಂದ ಸತ್ಯವನ್ನ ಬರೆಯಬೇಕು. ಪತ್ರಕರ್ತರು ಸಾಮಾಜಿಕ ಕಳಕಳಿ, ಪ್ರಚಲಿತ ಮಾಹಿತಿ, ಕಾನೂನಿನ ಅರಿವು, ಸತ್ಯ, ನಿಷ್ಠೆ ಮತ್ತು ನೈತಿಕತೆ ಗುಣಗಳನ್ನು ಅಳವಡಿಸಿಕೊಂಡಿರಬೇಕು ಎಂದರು.</p>.<p>ಜಮಖಂಡಿಯ ಪ್ರಾಧ್ಯಾಪಕ ಯಶವಂತ ವೈ. ಕೊಕ್ಕನವರ ಅವರು ಪತ್ರಿಕೋದ್ಯಮದ ವರ್ತಮಾನದ ಸಮಸ್ಯೆ ಹಾಗೂ ಸವಾಲುಗಳ ಕುರಿತು ಉಪನ್ಯಾಸ ನೀಡಿದರು.</p>.<p>ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಾಜಿ ಶಾಸಕರಾದ ಮಹೇಶ ಕುಮಠಳ್ಳಿ, ಶಹಜಹಾನ ಡೊಂಗರಗಾಂವ ಮಾತನಾಡಿ, ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಮತ್ತು ಪತ್ರಿಕಾರಂಗ ಒಂದು ವಾಹನದ ನಾಲ್ಕು ಚಕ್ರಗಳಿದ್ದಂತೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸುಭದ್ರ ಆಡಳಿತ ನಡೆಯಬೇಕಾದರೆ ಈ ನಾಲ್ಕು ಅಂಗಗಳು ತಮ್ಮ ಕಾರ್ಯವನ್ನು ನಿಷ್ಠೆಯಿಂದ ಮಾಡುವುದು ಅಗತ್ಯವಾಗಿದೆ ಎಂದರು.</p>.<p>ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು. ಇತ್ತೀಚಿಗೆ ನಡೆದ ಮುಖ್ಯ ರಸಪ್ರಶ್ನೆ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶಾಸಕ ಲಕ್ಷ್ಮಣ ಸವದಿ ಅವರೊಂದಿಗೆ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮ ಜರುಗಿತು.</p>.<p>ಸಮಾರಂಭದ ಸಾನಿಧ್ಯ ವಹಿಸಿದ್ದ ಗಚ್ಚಿನ ಮಠದ ಶಿವ ಬಸವ ಸ್ವಾಮೀಜಿ ಮಾತನಾಡಿದರು. ಕಾ.ನಿ.ಪ ಸಂಘದ ಅಧ್ಯಕ್ಷ ಪರಶುರಾಮ ನಂದೇಶ್ವರ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಎಸ್.ಎಸ್.ಎಂ.ಎಸ್ ಕಾಲೇಜಿನ ಸ್ಥಾನಿಕ ಅಧ್ಯಕ್ಷ ಮಲ್ಲಿಕಾರ್ಜುನ ಹಂಜಿ, ಪ್ರಾಚಾರ್ಯ ಪ್ರಶಾಂತ ಮಗದುಮ್ಮ, ಸಿಪಿಐ ಸಂತೋಷ ಹಳ್ಳೂರ, ಸಮಾಜ ಸೇವಕರಾದ ಸುನಿತಾ ಐಹೊಳೆ, ಅರುಣ ಯಲಗುದ್ರಿ, ಜಯ ಕಾಂಬಳೆ, ಪ್ರಶಾಂತ ತೋಡಕರ, ಪತ್ರಕರ್ತ ಸಂಘದ ಉಪಾಧ್ಯಕ್ಷ ರಮೇಶ ಬಾದವಾಡಗಿ, ಕಾರ್ಯದರ್ಶಿ ಶಿವಕುಮಾರ ಅಪರಾಜ, ಖಜಾಂಚಿ ಅಜಿತ್ ಕಾಂಬಳೆ, ಜಿಲ್ಲಾ ಪ್ರತಿನಿಧಿ ವಿಜಯಕುಮಾರ ಅಡಹಳ್ಳಿ, ನಿಕಟ ಪೂರ್ವ ಅಧ್ಯಕ್ಷ ಅಣ್ಣಾಸಾಹೇಬ ತೆಲಸಂಗ, ರಾಜು ಗಾಲಿ, ಚಂದ್ರಶೇಖರ ತೆವರಟ್ಟಿ, ರಾಕೇಶ ಮೈಗೂರ, ಡಾ. ಆರ್.ಎಸ್. ದೊಡ್ಡನಿಂಗಪ್ಪಗೋಳ, ಸಂತೋಷ ಬಡಕಂಬಿ, ಶಿವಾನಂದ ಪೂಜಾರಿ, ಜಬ್ಬಾರ್ ಚಿಂಚಲಿ, ವಿಲಾಸ ಕಾಂಬಳೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.</p>.<p>ಶಿವಕುಮಾರ ಅಪರಾಧ ಸ್ವಾಗತಿಸಿದರು. ರಾಮಣ್ಣ ದೊಡ್ಡನಿಂಗಪ್ಪಗೋಳ ನಿರೂಪಿಸಿದರು. ವಿಜಯಕುಮಾರ ಅಡಹಳ್ಳಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>