<p><strong>ಬೆಳಗಾವಿ:</strong> ‘ಮಹಾರಾಷ್ಟ್ರದಲ್ಲಿ ಬಂಧಿತನಾಗಿರುವ ಮಾದಕವಸ್ತು ಮಾರಾಟಗಾರ ಲಿಂಗರಾಜ್ ಕಣ್ಣಿ ಇವರು ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ಸಹಾಯಕ. ರಾಜ್ಯದಲ್ಲಿ ಪ್ರಿಯಾಂಕ್ ಖರ್ಗೆ ಅವರೇ ಮಾದಕವಸ್ತು ಮಾರಾಟಗಾರರ ಕಿಂಗ್ಪಿನ್ ಆಗಿದ್ದಾರೆ’ ಎಂದು ಬಿಜೆಪಿ ಮುಖಂಡ ಎಂ.ಬಿ.ಝಿರಲಿ ಆರೋಪಿಸಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಖರ್ಗೆ ಅವರ ಆಪ್ತ ಸಹಾಯಕ ಮತ್ತು ಕಾಂಗ್ರೆಸ್ನ ಕಲಬುರಗಿ ದಕ್ಷಿಣ ಬ್ಲಾಕ್ ಅಧ್ಯಕ್ಷ ಲಿಂಗರಾಜ್ ಕಣ್ಣಿ ಅವರನ್ನು ಮಾದಕವಸ್ತು ಮಾರಾಟ ಆರೋಪದಡಿ ಮುಂಬೈ ಪೊಲೀಸರು ಬಂಧಿಸಿದ್ದಾರೆ. ರಾಜ್ಯದಲ್ಲಿ ಮಾದಕವಸ್ತು ಮಾಫಿಯಾ ಸಕ್ರಿಯವಾಗಿದೆ. ಈ ಹಾವಳಿ ಶಾಲೆ– ಕಾಲೇಜುಗಳ ಆವರಣವನ್ನೂ ವ್ಯಾಪಿಸಿದೆ. ಕಲಬುರಗಿಯಲ್ಲಿ ಪೊಲೀಸ್ ರಕ್ಷಣೆಯಲ್ಲಿ ಕಳ್ಳಸಾಗಣೆ ವ್ಯವಹಾರ ನಡೆಯುತ್ತಿದೆ’ ಎಂದು ದೂರಿದರು.</p>.<p>‘ಕಲಬುರಗಿಯಲ್ಲಿ ಎರಡ್ಮೂರು ತಿಂಗಳ ಹಿಂದೆ ಡ್ರಗ್ಸ್ ವಶಕ್ಕೆ ಪಡೆಯಲಾಗಿತ್ತು. ಆದರೆ, ಆಗ ಯಾರ ಮೇಲೂ ಕ್ರಮ ಕೈಗೊಂಡಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಈಗ ನಿರಾತಂಕವಾಗಿ ಡ್ರಗ್ಸ್ ಮಾರಾಟ ಮಾಡಲಾಗುತ್ತಿದೆ’ ಎಂದೂ ಆರೋಪಿಸಿದರು. </p>.<p>‘ಕಾಂಗ್ರೆಸ್ ಶಾಸಕರು ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿಗಾಗಿ ₹50 ಕೋಟಿ ಅನುದಾನ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ವಿರೋಧ ಪಕ್ಷದ ಶಾಸಕರನ್ನು ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ. ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗಷ್ಟೇ ಅನುದಾನ ಘೋಷಿಸಿರುವುದು ಪಕ್ಷದೊಳಗಿನ ಆಂತರಿಕ ತಿಕ್ಕಾಟ ಹತ್ತಿಕ್ಕುವ ಉದ್ದೇಶವಾಗಿದೆ’ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಮಹಾರಾಷ್ಟ್ರದಲ್ಲಿ ಬಂಧಿತನಾಗಿರುವ ಮಾದಕವಸ್ತು ಮಾರಾಟಗಾರ ಲಿಂಗರಾಜ್ ಕಣ್ಣಿ ಇವರು ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ಸಹಾಯಕ. ರಾಜ್ಯದಲ್ಲಿ ಪ್ರಿಯಾಂಕ್ ಖರ್ಗೆ ಅವರೇ ಮಾದಕವಸ್ತು ಮಾರಾಟಗಾರರ ಕಿಂಗ್ಪಿನ್ ಆಗಿದ್ದಾರೆ’ ಎಂದು ಬಿಜೆಪಿ ಮುಖಂಡ ಎಂ.ಬಿ.ಝಿರಲಿ ಆರೋಪಿಸಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಖರ್ಗೆ ಅವರ ಆಪ್ತ ಸಹಾಯಕ ಮತ್ತು ಕಾಂಗ್ರೆಸ್ನ ಕಲಬುರಗಿ ದಕ್ಷಿಣ ಬ್ಲಾಕ್ ಅಧ್ಯಕ್ಷ ಲಿಂಗರಾಜ್ ಕಣ್ಣಿ ಅವರನ್ನು ಮಾದಕವಸ್ತು ಮಾರಾಟ ಆರೋಪದಡಿ ಮುಂಬೈ ಪೊಲೀಸರು ಬಂಧಿಸಿದ್ದಾರೆ. ರಾಜ್ಯದಲ್ಲಿ ಮಾದಕವಸ್ತು ಮಾಫಿಯಾ ಸಕ್ರಿಯವಾಗಿದೆ. ಈ ಹಾವಳಿ ಶಾಲೆ– ಕಾಲೇಜುಗಳ ಆವರಣವನ್ನೂ ವ್ಯಾಪಿಸಿದೆ. ಕಲಬುರಗಿಯಲ್ಲಿ ಪೊಲೀಸ್ ರಕ್ಷಣೆಯಲ್ಲಿ ಕಳ್ಳಸಾಗಣೆ ವ್ಯವಹಾರ ನಡೆಯುತ್ತಿದೆ’ ಎಂದು ದೂರಿದರು.</p>.<p>‘ಕಲಬುರಗಿಯಲ್ಲಿ ಎರಡ್ಮೂರು ತಿಂಗಳ ಹಿಂದೆ ಡ್ರಗ್ಸ್ ವಶಕ್ಕೆ ಪಡೆಯಲಾಗಿತ್ತು. ಆದರೆ, ಆಗ ಯಾರ ಮೇಲೂ ಕ್ರಮ ಕೈಗೊಂಡಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಈಗ ನಿರಾತಂಕವಾಗಿ ಡ್ರಗ್ಸ್ ಮಾರಾಟ ಮಾಡಲಾಗುತ್ತಿದೆ’ ಎಂದೂ ಆರೋಪಿಸಿದರು. </p>.<p>‘ಕಾಂಗ್ರೆಸ್ ಶಾಸಕರು ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿಗಾಗಿ ₹50 ಕೋಟಿ ಅನುದಾನ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ವಿರೋಧ ಪಕ್ಷದ ಶಾಸಕರನ್ನು ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ. ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗಷ್ಟೇ ಅನುದಾನ ಘೋಷಿಸಿರುವುದು ಪಕ್ಷದೊಳಗಿನ ಆಂತರಿಕ ತಿಕ್ಕಾಟ ಹತ್ತಿಕ್ಕುವ ಉದ್ದೇಶವಾಗಿದೆ’ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>