<p>ಬೆಳಗಾವಿ: ‘ಸಂಶೋಧನೆಗಳು ಸಮಾಜ ಎದುರಿಸುತ್ತಿರುವ ಸಮಸ್ಯೆಗಳ ನಿವಾರಣೆಗೆ ಪೂರಕವಾಗಿರಬೇಕು’ ಎಂದು ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ ಹೇಳಿದರು.</p>.<p>ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುವೆಂಪು ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಂಶೋಧನಾ ವಿದ್ಯಾರ್ಥಿಗಳ ಜೊತೆ ಚರ್ಚೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸರ್ಕಾರ ಮತ್ತು ವಿಶ್ವವಿದ್ಯಾಲಯದಿಂದ ಹಲವು ಸೌಕರ್ಯ, ಶಿಷ್ಯವೇತನ ನೀಡಲಾಗುತ್ತದೆ. ಜವಾಬ್ದಾರಿಯಿಂದ ಸಂಶೋಧನಾ ಅಧ್ಯಯನ ಮಾಡಬೇಕು. ವಿವಿಧ ವಿಶ್ವವಿದ್ಯಾಲಯಗಳ ಸಂಶೋಧನೆಗಳ ಕುರಿತು ಅಭ್ಯಸಿಸಬೇಕು’ ಎಂದರು.</p>.<p>ಸಂಪನ್ಮೂಲ ವ್ಯಕ್ತಿ ಶ್ರೀನಿವಾಸ ಪೋತಪ್ರಗಾಧ, ‘ಸಂಶೋಧನಾ ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಶ್ರದ್ಧೆ ಇರಬೇಕು. ಆಗ ಸಂಶೋಧನೆಗಳು ಪರಿಣಾಮಕಾರಿಯಾಗಿ ಪೂರ್ಣಗೊಳ್ಳುತ್ತವೆ. ಸಾಮಾಜಿಕ ಕಳಕಳಿಯುಳ್ಳ ಮತ್ತು ಪ್ರಚಲಿತ ವಿಷಯಗಳನ್ನು ಆಧರಿಸಿ ಸಂಶೋಧನೆ ಕೈಗೊಳ್ಳಬೇಕು’ ಎಂದರು.</p>.<p>ಪ್ರೊ.ಡಿ.ಎನ್.ಪಾಟೀಲ, ಪ್ರೊ.ವಿಶ್ವನಾಥ ಆವಟಿ, ಉಪ ಕುಲಸಚಿವ ಡಿ.ಕೆ.ಕಾಂಬ್ಳೆ, ಶೀತಲ್ ಅಕ್ಕೋಳೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ‘ಸಂಶೋಧನೆಗಳು ಸಮಾಜ ಎದುರಿಸುತ್ತಿರುವ ಸಮಸ್ಯೆಗಳ ನಿವಾರಣೆಗೆ ಪೂರಕವಾಗಿರಬೇಕು’ ಎಂದು ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ ಹೇಳಿದರು.</p>.<p>ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುವೆಂಪು ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಂಶೋಧನಾ ವಿದ್ಯಾರ್ಥಿಗಳ ಜೊತೆ ಚರ್ಚೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸರ್ಕಾರ ಮತ್ತು ವಿಶ್ವವಿದ್ಯಾಲಯದಿಂದ ಹಲವು ಸೌಕರ್ಯ, ಶಿಷ್ಯವೇತನ ನೀಡಲಾಗುತ್ತದೆ. ಜವಾಬ್ದಾರಿಯಿಂದ ಸಂಶೋಧನಾ ಅಧ್ಯಯನ ಮಾಡಬೇಕು. ವಿವಿಧ ವಿಶ್ವವಿದ್ಯಾಲಯಗಳ ಸಂಶೋಧನೆಗಳ ಕುರಿತು ಅಭ್ಯಸಿಸಬೇಕು’ ಎಂದರು.</p>.<p>ಸಂಪನ್ಮೂಲ ವ್ಯಕ್ತಿ ಶ್ರೀನಿವಾಸ ಪೋತಪ್ರಗಾಧ, ‘ಸಂಶೋಧನಾ ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಶ್ರದ್ಧೆ ಇರಬೇಕು. ಆಗ ಸಂಶೋಧನೆಗಳು ಪರಿಣಾಮಕಾರಿಯಾಗಿ ಪೂರ್ಣಗೊಳ್ಳುತ್ತವೆ. ಸಾಮಾಜಿಕ ಕಳಕಳಿಯುಳ್ಳ ಮತ್ತು ಪ್ರಚಲಿತ ವಿಷಯಗಳನ್ನು ಆಧರಿಸಿ ಸಂಶೋಧನೆ ಕೈಗೊಳ್ಳಬೇಕು’ ಎಂದರು.</p>.<p>ಪ್ರೊ.ಡಿ.ಎನ್.ಪಾಟೀಲ, ಪ್ರೊ.ವಿಶ್ವನಾಥ ಆವಟಿ, ಉಪ ಕುಲಸಚಿವ ಡಿ.ಕೆ.ಕಾಂಬ್ಳೆ, ಶೀತಲ್ ಅಕ್ಕೋಳೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>