‘ಮೇಲ್ಸೆತುವೆ ನಿರ್ಮಾಣದ ಸಂದರ್ಭದಲ್ಲಿ ರೈಲು ಹಳಿಗಳನ್ನು ದಾಟದಂತೆ ತಡೆಗೋಡೆ ಹಾಕಿರುವುದರಿಂದ ಇಲ್ಲಿನ ತಹಶೀಲ್ದಾರಗಲ್ಲಿ, ಬಾಂದೂರಗಲ್ಲಿ, ತಾನಾಜಿಗಲ್ಲಿಯ ನಿವಾಸಿಗಳಿಗೆ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ. ಬೇರೆ ಮಾರ್ಗದಿಂದ ಸುತ್ತುಹಾಕಿ ಸಂಚಾರ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಹೀಗಾಗಿ, ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು’ ಎಂದು ಸ್ಥಳೀಯ ನಿವಾಸಿಗಳು ಮನವಿ ಮಾಡಿದರು.