‘ಅವರು ರಾಜ್ಯದಾದ್ಯಂತ ಅಪಾರ ಅಭಿಮಾನಿ ಬಳಗ ಹೊಂದಿದ್ದಾರೆ. ಲಾಕ್ಡೌನ್ ಇರದಿದ್ದರೆ, ಅಂತ್ಯಕ್ರಿಯೆಯಲ್ಲಿ ವಿವಿಧ ಭಾಗಗಳಿಂದ ಸಾವಿರಾರು ಮಂದಿ ಬರುತ್ತಿದ್ದರು. ಈಗಾಗಲೇ ಆನ್ಲೈನ್ನಲ್ಲಿ ಶ್ರದ್ಧಾಂಜಲಿ ಸಭೆ ನಡೆಸಿದ್ದೇವೆ. ಜುಲೈ 5ರಂದು ಅವರ ಒಡನಾಡಿಗಳು, ಹಿತೈಷಿಗಳು, ರೈತ ನಾಯಕರು, ರೈತರು ಹಾಗೂ ಅಭಿಮಾನಗಳು ರಾಜ್ಯದ ಮೂಲೆ ಮೂಲೆಯಿಂದ ಬರಲಿದ್ದಾರೆ. ಅವರ ಹೆಸರಿನಲ್ಲಿ ಪ್ರತಿಷ್ಠಾನ ಸ್ಥಾಪಿಸುವುದು, ವಿಚಾರಸಂಕಿರಣ ಮೊದಲಾದ ಕಾರ್ಯಕ್ರಮಗಳನ್ನು ನಿಯಮಿತವಾಗಿ ಹಮ್ಮಿಕೊಳ್ಳುವುದು ಸೇರಿದಂತೆ ಹಲವು ವಿಷಯಗಳ ಬಗ್ಗೆ ಅಂದು ತೀರ್ಮಾನಿಸಲಾಗುವುದು’ ಎಂದು ಮಾಹಿತಿ ನೀಡಿದರು.