<p><strong>ಬೆಳಗಾವಿ: </strong>‘ಇಂದಿನ ತಾಂತ್ರಿಕ ಯುಗದಲ್ಲೂ ಜನಪದ ಸಾಹಿತ್ಯ ಪ್ರಸ್ತುತವಾಗಿದೆ. ಅದರಲ್ಲಿ ಜೀವನದ ಮೌಲ್ಯಗಳು ಅಡಕವಾಗಿವೆ. ಮನುಷ್ಯನಿಗೆ ಬದುಕುವ ದಾರಿಯನ್ನು ತೋರಿಸುತ್ತವೆ’ ಎಂದು ಸಾಹಿತಿ ಲಕ್ಷ್ಮಿ ಅರಿಬೆಂಚಿ ಹೇಳಿದರು.</p>.<p>ಇಲ್ಲಿನ ಕೆಎಲ್ಇ–ಡಾ.ಎಂ.ಎಸ್. ಶೇಷಗಿರಿ ಎಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜಿನಲ್ಲಿ ಕನ್ನಡ ಬಳಗದ ಪ್ರಸಕ್ತ ಸಾಲಿನ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಜನಪದ ಸಾಹಿತ್ಯ ಉಳಿಸಿ– ಬೆಳೆಸಬೇಕು. ಇದು ಕನ್ನಡ ಬಳಗದಂತಹ ಸಂಘಟನೆಗಳಿಂದ ಮಾತ್ರ ಸಾಧ್ಯ’ ಎಂದರು.</p>.<p>ಚಲನಚಿತ್ರ ನಟ ಸಂತೋಷ ಜಾವರೆ ಮಾತನಾಡಿ, ‘ಗಡಿ ಬೆಳಗಾವಿಯಲ್ಲಿ ಕನ್ನಡ ಕಾರ್ಯಕ್ರಮಗಳ ಅಗತ್ಯ ಬಹಳ ಇದೆ’ ಎಂದು ತಿಳಿಸಿದರು.</p>.<p>ಪ್ರಾಚಾರ್ಯ ಡಾ.ಬಸವರಾಜ ಕಟಗೇರಿ ಪ್ರಾಸ್ತಾವಿಕ ಮಾತನಾಡಿದರು. ಕಾಲೇಜಿನ ಸ್ಥಾನಿಕ ಆಡಳಿತ ಮಂಡಳಿ ಮುಖ್ಯಸ್ಥ ಎಸ್.ಸಿ. ಮೆಟಗುಡ್ ಅಧ್ಯಕ್ಷತೆ ವಹಿಸಿದ್ದರು.</p>.<p>ಸಹನಾ ಹಾಗೂ ಸೃಷ್ಠಿ ನಾಡಗೀತೆ ಹಾಡಿದರು. ಡಾ.ಎಚ್.ಪಿ. ರಜನಿ ಸ್ವಾಗತಿಸಿದರು. ಡಾ.ರವಿರಾಜ ಹವಾಲ್ದಾರ ಪರಿಚಯಿಸಿದರು. ಸಾಗರ ಹುಬ್ಬಳ್ಳಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>‘ಇಂದಿನ ತಾಂತ್ರಿಕ ಯುಗದಲ್ಲೂ ಜನಪದ ಸಾಹಿತ್ಯ ಪ್ರಸ್ತುತವಾಗಿದೆ. ಅದರಲ್ಲಿ ಜೀವನದ ಮೌಲ್ಯಗಳು ಅಡಕವಾಗಿವೆ. ಮನುಷ್ಯನಿಗೆ ಬದುಕುವ ದಾರಿಯನ್ನು ತೋರಿಸುತ್ತವೆ’ ಎಂದು ಸಾಹಿತಿ ಲಕ್ಷ್ಮಿ ಅರಿಬೆಂಚಿ ಹೇಳಿದರು.</p>.<p>ಇಲ್ಲಿನ ಕೆಎಲ್ಇ–ಡಾ.ಎಂ.ಎಸ್. ಶೇಷಗಿರಿ ಎಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜಿನಲ್ಲಿ ಕನ್ನಡ ಬಳಗದ ಪ್ರಸಕ್ತ ಸಾಲಿನ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಜನಪದ ಸಾಹಿತ್ಯ ಉಳಿಸಿ– ಬೆಳೆಸಬೇಕು. ಇದು ಕನ್ನಡ ಬಳಗದಂತಹ ಸಂಘಟನೆಗಳಿಂದ ಮಾತ್ರ ಸಾಧ್ಯ’ ಎಂದರು.</p>.<p>ಚಲನಚಿತ್ರ ನಟ ಸಂತೋಷ ಜಾವರೆ ಮಾತನಾಡಿ, ‘ಗಡಿ ಬೆಳಗಾವಿಯಲ್ಲಿ ಕನ್ನಡ ಕಾರ್ಯಕ್ರಮಗಳ ಅಗತ್ಯ ಬಹಳ ಇದೆ’ ಎಂದು ತಿಳಿಸಿದರು.</p>.<p>ಪ್ರಾಚಾರ್ಯ ಡಾ.ಬಸವರಾಜ ಕಟಗೇರಿ ಪ್ರಾಸ್ತಾವಿಕ ಮಾತನಾಡಿದರು. ಕಾಲೇಜಿನ ಸ್ಥಾನಿಕ ಆಡಳಿತ ಮಂಡಳಿ ಮುಖ್ಯಸ್ಥ ಎಸ್.ಸಿ. ಮೆಟಗುಡ್ ಅಧ್ಯಕ್ಷತೆ ವಹಿಸಿದ್ದರು.</p>.<p>ಸಹನಾ ಹಾಗೂ ಸೃಷ್ಠಿ ನಾಡಗೀತೆ ಹಾಡಿದರು. ಡಾ.ಎಚ್.ಪಿ. ರಜನಿ ಸ್ವಾಗತಿಸಿದರು. ಡಾ.ರವಿರಾಜ ಹವಾಲ್ದಾರ ಪರಿಚಯಿಸಿದರು. ಸಾಗರ ಹುಬ್ಬಳ್ಳಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>