ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈಲಹೊಂಗಲ| ಆಸ್ತಿ ವಿವಾದ: ಮಾಜಿ ಯೋಧನ ಕೊಲೆ

Published 4 ಜೂನ್ 2023, 16:00 IST
Last Updated 4 ಜೂನ್ 2023, 16:00 IST
ಅಕ್ಷರ ಗಾತ್ರ

ಬೈಲಹೊಂಗಲ: ಆಸ್ತಿ ವಿಚಾರವಾಗಿ ಸಹೋದರರ ಮಧ್ಯ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ತಾಲ್ಲೂಕಿನ ತಿಗಡಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

ತಿಗಡಿ ಗ್ರಾಮದ ನಿವಾಸಿ ಸುರೇಶ ಖಣಗಾಂವಿ ಕೊಲೆಯಾದವರು. ಸದಾ ಖಣಗಾಂವಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಶಂಕರ ಖಣಗಾಂವಿ ಆರೋಪಿ.

ಮಾಜಿ ಸೈನಿಕ ಸುರೇಶ ಅವರು ಜಮೀನಿನಲ್ಲಿ ಮನೆ ಮಾಡಿಕೊಂಡು, ಕೃಷಿಯಲ್ಲಿ ತೊಡಗಿದ್ದರು. ಆಸ್ತಿ ವಿಚಾರವಾಗಿ ಆರೋಪಿ ಶಂಕರ ಖಣಗಾಂವಿ ಹಾಗೂ ಹತ್ಯೆಗೀಡಾದ ಸುರೇಶ ನಡುವೆ ವಾಗ್ವಾದ ನಡೆದಿದ್ದು, ಶಂಕರ ಮಾರಕಾಸ್ತ್ರದಿಂದ ಸುರೇಶ ಅವರ ಮೇಲೆ ಹಲ್ಲೆ ನಡೆಸಿದ್ದರಿಂದ ಸುರೇಶ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಸ್ಥಳದಲ್ಲೇ ಇದ್ದ ಸದಾ ಖಣಗಾಂವಿ ಅವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT