<p><strong>ಚಿಕ್ಕೋಡಿ:</strong> ತಾಲ್ಲೂಕಿನ ಉಮರಾಣಿ ಗ್ರಾಮದ ವೃದ್ಧ ದಂಪತಿಗೆ ಸ್ವಯಾರ್ಜಿತ ಆಸ್ತಿ ಮರಳಿಸುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.</p><p>ಉಮರಾಣಿಯಲ್ಲಿ ರಾಮನಗೌಡ ಪಾಟೀಲ ಹಾಗೂ ಶೈಲಾ ದಂಪತಿ 2 ಎಕರೆ 10 ಗುಂಟೆ ಜಮೀನು ಮತ್ತು ತೋಟದ ಮನೆ ಹೊಂದಿದ್ದಾರೆ. ಅವರ ಇಬ್ಬರು ಪುತ್ರರು ಆಸ್ತಿ ದಾಖಲೆಗಳನ್ನು ಸುಪರ್ದಿಗೆ ತೆಗೆದುಕೊಂಡು, ತಂದೆ– ತಾಯಿಯನ್ನು ಮನೆಯಿಂದ ಹೊರ ಹಾಕಿದ್ದರು. ನೊಂದ ದಂಪತಿ ಚಿಕ್ಕೋಡಿ ಉಪ ವಿಭಾಗಾಧಿಕಾರಿಯವರ ನ್ಯಾಯಾಲಯದ ಮೊರೆ ಹೋಗಿದ್ದರು.</p><p>ಈ ಬಗ್ಗೆ ಜೂನ್ 20ರಂದು ‘ಪ್ರಜಾವಾಣಿ’ ಮುಖಪುಟದಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು. ಇದಕ್ಕೆ ಸ್ಪಂದಿಸಿದ ಚಿಕ್ಕೋಡಿ ಉಪ ವಿಭಾಗಾಧಿಕಾರಿ ಸುಭಾಷ ಸಂಪಗಾಂವಿ ‘ಹಿರಿಯ ನಾಗರಿಕರ ರಕ್ಷಣಾ ಕಾಯ್ದೆ–2007’ರಡಿ ಅಸ್ತಿ ಮರಳಿಸುವಂತೆ ಆದೇಶ ಹೊರಡಿಸಿದ್ದಾರೆ. ಆದೇಶದಲ್ಲಿ ‘ಪ್ರಜಾವಾಣಿ’ ವರದಿಯನ್ನೂ ನಮೂದಿಸಿದ್ದಾರೆ.</p><p>‘ಕಳೆದ 17 ವರ್ಷಗಳಿಂದ ಸತತ ಹೋರಾಟ ಮಾಡುತ್ತಿದ್ದರೂ ನ್ಯಾಯ ಸಿಕ್ಕಿರಲಿಲ್ಲ. ‘ಪ್ರಜಾವಾಣಿ’ ವರದಿಯಿಂದ ಒಂದೇ ತಿಂಗಳಲ್ಲಿ ದೊರೆಯಿತು. ಪತ್ರಿಕೆಗೆ ಧನ್ಯವಾದ ಸಲ್ಲಿಸುತ್ತೇವೆ’ ಎಂದು ರಾಮನಗೌಡ ಹಾಗೂ ಶೈಲಾ ದಂಪತಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕೋಡಿ:</strong> ತಾಲ್ಲೂಕಿನ ಉಮರಾಣಿ ಗ್ರಾಮದ ವೃದ್ಧ ದಂಪತಿಗೆ ಸ್ವಯಾರ್ಜಿತ ಆಸ್ತಿ ಮರಳಿಸುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.</p><p>ಉಮರಾಣಿಯಲ್ಲಿ ರಾಮನಗೌಡ ಪಾಟೀಲ ಹಾಗೂ ಶೈಲಾ ದಂಪತಿ 2 ಎಕರೆ 10 ಗುಂಟೆ ಜಮೀನು ಮತ್ತು ತೋಟದ ಮನೆ ಹೊಂದಿದ್ದಾರೆ. ಅವರ ಇಬ್ಬರು ಪುತ್ರರು ಆಸ್ತಿ ದಾಖಲೆಗಳನ್ನು ಸುಪರ್ದಿಗೆ ತೆಗೆದುಕೊಂಡು, ತಂದೆ– ತಾಯಿಯನ್ನು ಮನೆಯಿಂದ ಹೊರ ಹಾಕಿದ್ದರು. ನೊಂದ ದಂಪತಿ ಚಿಕ್ಕೋಡಿ ಉಪ ವಿಭಾಗಾಧಿಕಾರಿಯವರ ನ್ಯಾಯಾಲಯದ ಮೊರೆ ಹೋಗಿದ್ದರು.</p><p>ಈ ಬಗ್ಗೆ ಜೂನ್ 20ರಂದು ‘ಪ್ರಜಾವಾಣಿ’ ಮುಖಪುಟದಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು. ಇದಕ್ಕೆ ಸ್ಪಂದಿಸಿದ ಚಿಕ್ಕೋಡಿ ಉಪ ವಿಭಾಗಾಧಿಕಾರಿ ಸುಭಾಷ ಸಂಪಗಾಂವಿ ‘ಹಿರಿಯ ನಾಗರಿಕರ ರಕ್ಷಣಾ ಕಾಯ್ದೆ–2007’ರಡಿ ಅಸ್ತಿ ಮರಳಿಸುವಂತೆ ಆದೇಶ ಹೊರಡಿಸಿದ್ದಾರೆ. ಆದೇಶದಲ್ಲಿ ‘ಪ್ರಜಾವಾಣಿ’ ವರದಿಯನ್ನೂ ನಮೂದಿಸಿದ್ದಾರೆ.</p><p>‘ಕಳೆದ 17 ವರ್ಷಗಳಿಂದ ಸತತ ಹೋರಾಟ ಮಾಡುತ್ತಿದ್ದರೂ ನ್ಯಾಯ ಸಿಕ್ಕಿರಲಿಲ್ಲ. ‘ಪ್ರಜಾವಾಣಿ’ ವರದಿಯಿಂದ ಒಂದೇ ತಿಂಗಳಲ್ಲಿ ದೊರೆಯಿತು. ಪತ್ರಿಕೆಗೆ ಧನ್ಯವಾದ ಸಲ್ಲಿಸುತ್ತೇವೆ’ ಎಂದು ರಾಮನಗೌಡ ಹಾಗೂ ಶೈಲಾ ದಂಪತಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>