ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಉಪ ನೋಂದಣಾಧಿಕಾರಿ ಪದ್ಮನಾಭ ಗುಡಿ, ‘ಅನಾರೋಗ್ಯಕ್ಕೆ ಒಳಗಾದವರ ಸಹಿಗಾಗಿ ಸ್ಥಳಕ್ಕೆ ಹೋಗಲು ಅವಕಾಶವಿದೆ. ಕುಟುಂಬದವರು ಇದಕ್ಕೆ ₹ 1,000 ಶುಲ್ಕ ತುಂಬಿ ಅರ್ಜಿ ಸಲ್ಲಿಸಬೇಕು. ಆದರೆ, ಮಹಾದೇವಿ ಕುಟುಂಬದವರು ಅರ್ಜಿ ಸಲ್ಲಿಸಿಲ್ಲ. ಹಾಗಾಗಿ, ನಾವು ಆಸ್ಪತ್ರೆಗೆ ಹೋಗಿಲ್ಲ. ಏಕಾಏಕಿ ಕಚೇರಿಗೆ ಕರೆತಂದರು. ನಿಯಮಗಳ ಪ್ರಕಾರ ನೋಂದಣಿ ಮಾಡಿಸಿದ್ದೇವೆ’ ಎಂದರು. ಇದರ ವಿಡಿಯೊ ತುಣುಕುಗಳು ಶನಿವಾರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದವು.