<p><strong>ರಾಮದುರ್ಗ</strong>: ಮಹಿಳೆಯರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಸಬಲರಾಗಬೇಕಾದರೆ ಅವಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಬೇಕು. ಹೆಣ್ಣು ಎನ್ನುವ ಕಾರಣಕ್ಕೆ ಶಿಕ್ಷಣದಿಂದ ವಂಚಿತಗೊಳಿಸಬಾರದು ಎಂದು ಮಹಿಳಾ ನಾಯಕಿ ಜಮುನಾ ಪಟ್ಟಣ ಹೇಳಿದರು.</p>.<p>ಜನವಾದಿ ಮಹಿಳಾ ಸಂಘಟನೆ ನೇತೃತ್ವದಲ್ಲಿ ಸರಸ್ವತಿ ಕಲ್ಯಾಣ ಮಂಟಪದಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿ, ಹೆಣ್ಣು ಕಲಿತರೆ ಕುಟುಂಬವೇ ಸುಶಿಕ್ಷಿತಗೊಳ್ಳಲಿದೆ ಎಂದು ತಿಳಿಸಿದರು.</p>.<p>ಕಾರ್ಮಿಕ ಮುಖಂಡ ಜಿ.ಎಂ. ಜೈನೆಖಾನ್ ಅಧ್ಯಕ್ಷತೆ ವಹಿಸಿದ್ದರು. ಸ್ವಾತಂತ್ರ್ಯ ಚಳವಳಿಯ ಮುಂಚೂಣಿಯಲ್ಲಿದ್ದ ಮಹಿಳೆಯರು ಧೈರ್ಯ, ಸಾಹಸ ಜನ ಮೆಚ್ಚುವಂತ ಕಾರ್ಯ. ಸರ್ಕಾರ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಒಂದು ದಿನ ರಜೆ ಘೋಷಿಸಲು ಹೋರಾಟ ಮಾಡಬೇಕು ಎಂದು ಹೇಳಿದರು.</p>.<p>ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ನಾಗಪ್ಪ ಸಂಗೊಳ್ಳಿ ಮಾತನಾಡಿ, ‘ಪ್ರತಿಯೊಂದು ರಂಗದಲ್ಲಿ ಅದರಲ್ಲೂ ರಾಜಕೀಯ ರಂಗದಲ್ಲಿ ಮಹಿಳೆ ಪ್ರಮುಖ ಪಾತ್ರ ವಹಿಸಬೇಕು. ಮಹಿಳಾ ಮೀಸಲಾತಿಗೆ ನಿರಂತರ ಶ್ರಮ ವಹಿಸಬೇಕು’ ಎಂದು ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ಮಹಾದೇವಿ ಸೊಪ್ಪಡ್ಲ, ಶಕುಂತಲಾ ನಾರಾಯಣಕರ, ಮಾಲಾ ಇಳಿಗೇರ, ರುಕ್ಮವ್ವ ಬಿಜ್ಜಣ್ಣವರ, ಮಾಲಾಶ್ರೀ ಕಳ್ಳಿಮಠ, ರೇಖಾ ಪುಜಾರಿ, ಶೈಲಾ ಕುಂಬಾರ, ಶಕೀಲಾ ಮುಜಾವರ, ವಿಜಯಲಕ್ಷ್ಮೀ ಸಿದ್ದಿಭಾಂವಿ ಇದ್ದರು. ಸರಸ್ವತಿ ಮಾಳಶೆಟ್ಟಿ ಸ್ವಾಗತಿಸಿದರು, ತುಳಸಮ್ಮ ಮಾಳದಕರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮದುರ್ಗ</strong>: ಮಹಿಳೆಯರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಸಬಲರಾಗಬೇಕಾದರೆ ಅವಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಬೇಕು. ಹೆಣ್ಣು ಎನ್ನುವ ಕಾರಣಕ್ಕೆ ಶಿಕ್ಷಣದಿಂದ ವಂಚಿತಗೊಳಿಸಬಾರದು ಎಂದು ಮಹಿಳಾ ನಾಯಕಿ ಜಮುನಾ ಪಟ್ಟಣ ಹೇಳಿದರು.</p>.<p>ಜನವಾದಿ ಮಹಿಳಾ ಸಂಘಟನೆ ನೇತೃತ್ವದಲ್ಲಿ ಸರಸ್ವತಿ ಕಲ್ಯಾಣ ಮಂಟಪದಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿ, ಹೆಣ್ಣು ಕಲಿತರೆ ಕುಟುಂಬವೇ ಸುಶಿಕ್ಷಿತಗೊಳ್ಳಲಿದೆ ಎಂದು ತಿಳಿಸಿದರು.</p>.<p>ಕಾರ್ಮಿಕ ಮುಖಂಡ ಜಿ.ಎಂ. ಜೈನೆಖಾನ್ ಅಧ್ಯಕ್ಷತೆ ವಹಿಸಿದ್ದರು. ಸ್ವಾತಂತ್ರ್ಯ ಚಳವಳಿಯ ಮುಂಚೂಣಿಯಲ್ಲಿದ್ದ ಮಹಿಳೆಯರು ಧೈರ್ಯ, ಸಾಹಸ ಜನ ಮೆಚ್ಚುವಂತ ಕಾರ್ಯ. ಸರ್ಕಾರ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಒಂದು ದಿನ ರಜೆ ಘೋಷಿಸಲು ಹೋರಾಟ ಮಾಡಬೇಕು ಎಂದು ಹೇಳಿದರು.</p>.<p>ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ನಾಗಪ್ಪ ಸಂಗೊಳ್ಳಿ ಮಾತನಾಡಿ, ‘ಪ್ರತಿಯೊಂದು ರಂಗದಲ್ಲಿ ಅದರಲ್ಲೂ ರಾಜಕೀಯ ರಂಗದಲ್ಲಿ ಮಹಿಳೆ ಪ್ರಮುಖ ಪಾತ್ರ ವಹಿಸಬೇಕು. ಮಹಿಳಾ ಮೀಸಲಾತಿಗೆ ನಿರಂತರ ಶ್ರಮ ವಹಿಸಬೇಕು’ ಎಂದು ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ಮಹಾದೇವಿ ಸೊಪ್ಪಡ್ಲ, ಶಕುಂತಲಾ ನಾರಾಯಣಕರ, ಮಾಲಾ ಇಳಿಗೇರ, ರುಕ್ಮವ್ವ ಬಿಜ್ಜಣ್ಣವರ, ಮಾಲಾಶ್ರೀ ಕಳ್ಳಿಮಠ, ರೇಖಾ ಪುಜಾರಿ, ಶೈಲಾ ಕುಂಬಾರ, ಶಕೀಲಾ ಮುಜಾವರ, ವಿಜಯಲಕ್ಷ್ಮೀ ಸಿದ್ದಿಭಾಂವಿ ಇದ್ದರು. ಸರಸ್ವತಿ ಮಾಳಶೆಟ್ಟಿ ಸ್ವಾಗತಿಸಿದರು, ತುಳಸಮ್ಮ ಮಾಳದಕರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>