<p><strong>ಚಿಕ್ಕೋಡಿ: </strong>ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೆ ತರುವಂತೆ ಒತ್ತಾಯಿಸಿ ಇಲ್ಲಿನ ಸರ್ಕಾರಿ ನೌಕರರು, ವಿವಿಧ ಸಂಘಟನೆಗಳ ಸದಸ್ಯರು ತಹಶೀಲ್ದಾರ್ ಮೂಲಕ ಶನಿವಾರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.</p>.<p>2006ರಿಂದ ನೂತನ ಪಿಂಚಣಿ ಯೋಜನೆ ಜಾರಿಗೆ ಬಂದಿದ್ದು, ಇದು ಸರ್ಕಾರಿ ನೌಕರರ ಹಾಗೂ ಕುಟುಂಬಸ್ಥರ ಜೀವನ ಅತಂತ್ರಗೊಳಿಸಿದೆ. ಸರ್ಕಾರಿ ನೌಕರರ ಸುಮಾರು 75 ಲಕ್ಷ ಕುಟಂಬ ಸದಸ್ಯರು ಹಾಗೂ 6 ಲಕ್ಷಕ್ಕೂ ಹೆಚ್ಚು ಅವಲಂಬಿತರ ಮೇಲೆ ನೇರ ಪರಿಣಾಮ ಬೀರಿದೆ. ಅದಕ್ಕಾಗಿ ಹೊಸ ಪಿಂಚಣಿ ಯೋಜನೆಯನ್ನು ಹಿಂಪಡೆದು ಹಳೆಯ ಪಿಂಚಣಿ ಯೋಜನೆ ಶೀಘ್ರ ಜಾರಿಗೊಳಿಸುವಂತೆ ಒತ್ತಾಯಿಸಿದರು.</p>.<p>ಸರ್ಕಾರಿ ನೌಕರರ ವಿವಿಧ ಸಂಘಟನೆಗಳ ಪದಾಧಿಕಾರಿಗಳಾದ ವೈ.ಎಸ್.ಬುಡ್ಡಗೋಳ, ಎಸ್.ಎನ್.ಬೆಳಗಾವಿ, ಸಿದ್ದು ಧೂಪದಾಳ, ಜಿ.ಎಂ.ಕಾಂಬಳೆ, ಸಿ.ಬಿ.ಅರಭಾವಿ, ಆರ್.ಕೆ.ಕಾಂಬಳೆ, ಎಸ್.ಜಿ.ಮೋಮಿನ, ಅಜಯ ಬೀರನ್ನವರ, ಉಮೇಶ ತೋಟದ, ಮಹೇಶ ವಾಣಿ, ಶಿವಾನಂದ ಸನದಿ, ಬಸವರಾಜ ಕುನ್ನೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕೋಡಿ: </strong>ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೆ ತರುವಂತೆ ಒತ್ತಾಯಿಸಿ ಇಲ್ಲಿನ ಸರ್ಕಾರಿ ನೌಕರರು, ವಿವಿಧ ಸಂಘಟನೆಗಳ ಸದಸ್ಯರು ತಹಶೀಲ್ದಾರ್ ಮೂಲಕ ಶನಿವಾರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.</p>.<p>2006ರಿಂದ ನೂತನ ಪಿಂಚಣಿ ಯೋಜನೆ ಜಾರಿಗೆ ಬಂದಿದ್ದು, ಇದು ಸರ್ಕಾರಿ ನೌಕರರ ಹಾಗೂ ಕುಟುಂಬಸ್ಥರ ಜೀವನ ಅತಂತ್ರಗೊಳಿಸಿದೆ. ಸರ್ಕಾರಿ ನೌಕರರ ಸುಮಾರು 75 ಲಕ್ಷ ಕುಟಂಬ ಸದಸ್ಯರು ಹಾಗೂ 6 ಲಕ್ಷಕ್ಕೂ ಹೆಚ್ಚು ಅವಲಂಬಿತರ ಮೇಲೆ ನೇರ ಪರಿಣಾಮ ಬೀರಿದೆ. ಅದಕ್ಕಾಗಿ ಹೊಸ ಪಿಂಚಣಿ ಯೋಜನೆಯನ್ನು ಹಿಂಪಡೆದು ಹಳೆಯ ಪಿಂಚಣಿ ಯೋಜನೆ ಶೀಘ್ರ ಜಾರಿಗೊಳಿಸುವಂತೆ ಒತ್ತಾಯಿಸಿದರು.</p>.<p>ಸರ್ಕಾರಿ ನೌಕರರ ವಿವಿಧ ಸಂಘಟನೆಗಳ ಪದಾಧಿಕಾರಿಗಳಾದ ವೈ.ಎಸ್.ಬುಡ್ಡಗೋಳ, ಎಸ್.ಎನ್.ಬೆಳಗಾವಿ, ಸಿದ್ದು ಧೂಪದಾಳ, ಜಿ.ಎಂ.ಕಾಂಬಳೆ, ಸಿ.ಬಿ.ಅರಭಾವಿ, ಆರ್.ಕೆ.ಕಾಂಬಳೆ, ಎಸ್.ಜಿ.ಮೋಮಿನ, ಅಜಯ ಬೀರನ್ನವರ, ಉಮೇಶ ತೋಟದ, ಮಹೇಶ ವಾಣಿ, ಶಿವಾನಂದ ಸನದಿ, ಬಸವರಾಜ ಕುನ್ನೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>