‘ಸಗಟು ತರಕಾರಿ ವ್ಯಾಪಾರಕ್ಕಾಗಿ ನಮಗೆ ಯೋಗ್ಯ ಸ್ಥಳ ಬೇಕೆಂದು ಎಪಿಎಂಸಿ, ಬುಡಾ, ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಅಧಿಕಾರಿಗಳಿಗೆ ಸಂಘದಿಂದ ಮನವಿ ಸಲ್ಲಿಸಿದ್ದೆವು. ನಗರಾಭಿವೃದ್ಧಿ ಇಲಾಖೆಯು ಗಾಂಧಿನಗರದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ 10.20 ಎಕರೆ ಜಾಗ ನೀಡಿದೆ. ಈ ಜಮೀನನ್ನು ಕೃಷಿ ಉಪಯೋಗದಿಂದ ಮಾರುಕಟ್ಟೆ ಉದ್ದೇಶಕ್ಕಾಗಿ ಪರಿವರ್ತಿಸಲು ಜಿಲ್ಲಾಧಿಕಾರಿ 2016ರ ನವೆಂಬರ್ನಲ್ಲಿ ಪರವಾನಗಿ ನೀಡಿದ್ದಾರೆ. ಜಮೀನು ಖರೀದಿ, ಭೂಪರಿವರ್ತನೆ, ವಿನ್ಯಾಸ ಹಾಗೂ ರಸ್ತೆ, ಬುನಾದಿ ಕಾಮಗಾರಿ ಮೊದಲಾದವುಗಳಿಗೆ ಈಗಾಗಲೇ ₹ 11 ಕೋಟಿ ವೆಚ್ಚವಾಗಿದೆ. ಹೀಗಿರುವಾಗ ಎಪಿಎಂಸಿಯವರು ತಮ್ಮ ಲಾಭಕ್ಕೋಸ್ಕರ ನಮ್ಮನ್ನು ಒಕ್ಕಲೆಬ್ಬಿಸುತ್ತಿದ್ದಾರೆ’ ಎಂದು ದೂರಿದರು.