ಬೆಳಗಾವಿ: 31 ವರ್ಷ ಹಿಂದಿನ ಗಲಭೆ ಪ್ರಕರಣದ ಆರೋಪಿ ಬಂಧನ ಖಂಡಿಸಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.
ಇಲ್ಲಿನ ರಾಣಿ ಚನ್ನಮ್ಮನ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, 'ಅಯೋಧ್ಯೆಯಲ್ಲಿ ನಡೆಯಲಿರುವ ರಾಮನ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಸಂದರ್ಭ ರಾಜ್ಯ ಸರ್ಕಾರ ಹಿಂದೂ ವಿರೋಧಿಯಾಗಿ ವರ್ತಿಸುತ್ತಿದೆ' ಎಂದು ಆರೋಪಿಸಿದರು.
ಸಂಸದೆ ಮಂಗಲಾ ಅಂಗಡಿ, ಮುರುಘೇಂದ್ರಗೌಡ ಪಾಟೀಲ, ಧಜಂಯಯ ಜಾಧವ ಇತರರಿದ್ದರು.