ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ, ‘ಕೆಲವರು ರಾಜಕೀಯ ಲಾಭಕ್ಕಾಗಿ ಈ ರೀತಿ ಮಾಡುತ್ತಾರೆ. ಅಂತೆಯೇ ಇಲ್ಲಿಯೂ ಕೇವಲ ನಾಲ್ಕು ಜನರು ವಿರೋಧಿಸಿದ್ದಾರೆ. ರಾಜಕೀಯ ಬದುಕಿನಲ್ಲಿ ಇದೇನೂ ಹೊಸತಲ್ಲ. ಇಲ್ಲಿ ಇಡೀ ಸಮುದಾಯ ಪ್ರತಿಭಟನೆ ಮಾಡುತ್ತಿದೆ. ಆದರೆ, ನಿಪ್ಪಾಣಿಯಲ್ಲಿ ನಡೆದ ಸಭೆಯೇ ಬೇರೆ. ಇಂತಹ ಸೂಕ್ಷ್ಮ ವಿಚಾರಗಳನ್ನು ಕೆಲವರು ಅರ್ಥೈಸಿಕೊಳ್ಳಬೇಕು’ ಎಂದರು.