‘ಸರ್ಕಾರದ ಸಹಕಾರವು ಅನೇಕ ಅವೈಜ್ಞಾನಿಕ ಔಷಧಿ ಮತ್ತು ಕೋವಿಡ್-19 ಚಿಕಿತ್ಸೆಯ ಕುರಿತ ಪ್ರಸಾರಕ್ಕೆ ಕಾರಣವಾಗಿದೆ. ಕೊರೊನ ಯೋಧರು ಹಗಲು–ರಾತ್ರಿ ಎನ್ನದೇ, ದಣಿವಿಲ್ಲದೆ ಕೆಲಸ ಮಾಡುತ್ತಿದ್ದಾರೆ. ಹೀಗಿರುವಾಗ, ಅವೈಜ್ಞಾನಿಕ ಹೇಳಿಕೆಗಳು ಆಧುನಿಕ ಔಷಧಿ ವೈದ್ಯರ ಬಗ್ಗೆ ಅವಹೇಳನಕಾರಿಯಲ್ಲದೇ ಬೇರೇನೂ ಅಲ್ಲ. ವೈಜ್ಞಾನಿಕ ಚಿಕಿತ್ಸೆಗೆ ಇಂತಹ ಬೆಳವಣಿಗೆಗಳು ಹಾನಿಕಾರಕವಾಗಿವೆ. ಸಾಮಾನ್ಯ ಪ್ರಜ್ಞೆಯುಳ್ಳವರು ಮತ್ತು ಆರೋಗ್ಯ ಕಾರ್ಯಕರ್ತರು ಇಂತಹ ಬೆಳವಣಿಗೆಗಳ ಬಗ್ಗೆ ಚಿಂತಿತರಾಗಿದ್ದಾರೆ’ ಎಂದು ಕಳವಳ ವ್ಯಕ್ತವಾಯಿತು.