ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲಸಂಗ: ಕೆಲಸಕ್ಕೆ ಆಗ್ರಹಿಸಿ ಮಹಿಳೆಯರ ಪ್ರತಿಭಟನೆ

Last Updated 31 ಜುಲೈ 2021, 13:46 IST
ಅಕ್ಷರ ಗಾತ್ರ

ತೆಲಸಂಗ (ಬೆಳಗಾವಿ ಜಿಲ್ಲೆ): ಸಮೀಪದ ಕನ್ನಾಳ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ಕೊಡುವಂತೆ ಆಗ್ರಹಿಸಿ ಮಹಿಳೆಯರು ಬುಟ್ಟಿಗಳು ಮೊದಲಾದ ಪರಿಕರಗಳೊಂದಿಗೆ ಗ್ರಾಮ ಪಂಚಾಯ್ತಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.

‘ಸಸಿಗಳನ್ನು ನೆಡುವುದಕ್ಕಾಗಿ ಪಂಚಾಯ್ತಿಯಿಂದ ಆರು ಸಾವಿರ ಗುಂಡಿಗಳನ್ನು ಜೆಸಿಬಿ ಬಳಸಿ ತೋಡಿಸಿದ್ದೀರಿ. ಅದಕ್ಕೆ ಸಾವಿರಾರು ರೂಪಾಯಿ ಖರ್ಚು ಮಾಡಿದ್ದೀರಿ. ಇದರ ಬಗ್ಗೆ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದರು. ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. ‘₹ 6 ಲಕ್ಷ ಲೂಟಿ ಮಾಡಲಾಗಿದೆ’ ಎಂದು ದೂರಿದರು. ಕೆಲವರು ಮಕ್ಕಳೊಂದಿಗೆ ಬಂದಿದ್ದರು.

‘ಜೆಸಿಬಿಯಿಂದ ಕೆಲಸ ಮಾಡಿಸಿದ್ದು ನಿಜ’ ಎಂದು ಪಿಡಿಒ ಎಂ.ಎಸ್. ಚೌದರಿ ಒಪ್ಪಿಕೊಂಡರು. ‘ಹಿಂದೆ ಆಗಿದ್ದು ಬಿಟ್ಟು ಬಿಡಿ. ಇಂದಿನಿಂದ ಹೊಸ ಕಾಮಗಾರಿಯಲ್ಲಿ ಕೆಲಸ ಕೊಡಲಾಗುವುದು’ ಎಂದು ತಿಳಿಸಿದರು.

ಮಧ್ಯಾಹ್ನ ಸ್ಥಳಕ್ಕೆ ಬಂದ ಅಥಣಿ ತಾ.ಪಂ. ಇಒ ಶೇಖರ ಕರಿಬಸಪ್ಪಗೋಳ, ‘ತಪ್ಪಿತಸ್ಥ ಅಧಿಕಾರಿ ವಿರುದ್ಧ ವಾರದಲ್ಲಿ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದ ಬಳಿಕ ಮಹಿಳೆಯರು ಪ್ರತಿಭಟನೆ ವಾಪಸ್ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT