<p>ತೆಲಸಂಗ (ಬೆಳಗಾವಿ ಜಿಲ್ಲೆ): ಸಮೀಪದ ಕನ್ನಾಳ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ಕೊಡುವಂತೆ ಆಗ್ರಹಿಸಿ ಮಹಿಳೆಯರು ಬುಟ್ಟಿಗಳು ಮೊದಲಾದ ಪರಿಕರಗಳೊಂದಿಗೆ ಗ್ರಾಮ ಪಂಚಾಯ್ತಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.</p>.<p>‘ಸಸಿಗಳನ್ನು ನೆಡುವುದಕ್ಕಾಗಿ ಪಂಚಾಯ್ತಿಯಿಂದ ಆರು ಸಾವಿರ ಗುಂಡಿಗಳನ್ನು ಜೆಸಿಬಿ ಬಳಸಿ ತೋಡಿಸಿದ್ದೀರಿ. ಅದಕ್ಕೆ ಸಾವಿರಾರು ರೂಪಾಯಿ ಖರ್ಚು ಮಾಡಿದ್ದೀರಿ. ಇದರ ಬಗ್ಗೆ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದರು. ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. ‘₹ 6 ಲಕ್ಷ ಲೂಟಿ ಮಾಡಲಾಗಿದೆ’ ಎಂದು ದೂರಿದರು. ಕೆಲವರು ಮಕ್ಕಳೊಂದಿಗೆ ಬಂದಿದ್ದರು.</p>.<p>‘ಜೆಸಿಬಿಯಿಂದ ಕೆಲಸ ಮಾಡಿಸಿದ್ದು ನಿಜ’ ಎಂದು ಪಿಡಿಒ ಎಂ.ಎಸ್. ಚೌದರಿ ಒಪ್ಪಿಕೊಂಡರು. ‘ಹಿಂದೆ ಆಗಿದ್ದು ಬಿಟ್ಟು ಬಿಡಿ. ಇಂದಿನಿಂದ ಹೊಸ ಕಾಮಗಾರಿಯಲ್ಲಿ ಕೆಲಸ ಕೊಡಲಾಗುವುದು’ ಎಂದು ತಿಳಿಸಿದರು.</p>.<p>ಮಧ್ಯಾಹ್ನ ಸ್ಥಳಕ್ಕೆ ಬಂದ ಅಥಣಿ ತಾ.ಪಂ. ಇಒ ಶೇಖರ ಕರಿಬಸಪ್ಪಗೋಳ, ‘ತಪ್ಪಿತಸ್ಥ ಅಧಿಕಾರಿ ವಿರುದ್ಧ ವಾರದಲ್ಲಿ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದ ಬಳಿಕ ಮಹಿಳೆಯರು ಪ್ರತಿಭಟನೆ ವಾಪಸ್ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತೆಲಸಂಗ (ಬೆಳಗಾವಿ ಜಿಲ್ಲೆ): ಸಮೀಪದ ಕನ್ನಾಳ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ಕೊಡುವಂತೆ ಆಗ್ರಹಿಸಿ ಮಹಿಳೆಯರು ಬುಟ್ಟಿಗಳು ಮೊದಲಾದ ಪರಿಕರಗಳೊಂದಿಗೆ ಗ್ರಾಮ ಪಂಚಾಯ್ತಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.</p>.<p>‘ಸಸಿಗಳನ್ನು ನೆಡುವುದಕ್ಕಾಗಿ ಪಂಚಾಯ್ತಿಯಿಂದ ಆರು ಸಾವಿರ ಗುಂಡಿಗಳನ್ನು ಜೆಸಿಬಿ ಬಳಸಿ ತೋಡಿಸಿದ್ದೀರಿ. ಅದಕ್ಕೆ ಸಾವಿರಾರು ರೂಪಾಯಿ ಖರ್ಚು ಮಾಡಿದ್ದೀರಿ. ಇದರ ಬಗ್ಗೆ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದರು. ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. ‘₹ 6 ಲಕ್ಷ ಲೂಟಿ ಮಾಡಲಾಗಿದೆ’ ಎಂದು ದೂರಿದರು. ಕೆಲವರು ಮಕ್ಕಳೊಂದಿಗೆ ಬಂದಿದ್ದರು.</p>.<p>‘ಜೆಸಿಬಿಯಿಂದ ಕೆಲಸ ಮಾಡಿಸಿದ್ದು ನಿಜ’ ಎಂದು ಪಿಡಿಒ ಎಂ.ಎಸ್. ಚೌದರಿ ಒಪ್ಪಿಕೊಂಡರು. ‘ಹಿಂದೆ ಆಗಿದ್ದು ಬಿಟ್ಟು ಬಿಡಿ. ಇಂದಿನಿಂದ ಹೊಸ ಕಾಮಗಾರಿಯಲ್ಲಿ ಕೆಲಸ ಕೊಡಲಾಗುವುದು’ ಎಂದು ತಿಳಿಸಿದರು.</p>.<p>ಮಧ್ಯಾಹ್ನ ಸ್ಥಳಕ್ಕೆ ಬಂದ ಅಥಣಿ ತಾ.ಪಂ. ಇಒ ಶೇಖರ ಕರಿಬಸಪ್ಪಗೋಳ, ‘ತಪ್ಪಿತಸ್ಥ ಅಧಿಕಾರಿ ವಿರುದ್ಧ ವಾರದಲ್ಲಿ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದ ಬಳಿಕ ಮಹಿಳೆಯರು ಪ್ರತಿಭಟನೆ ವಾಪಸ್ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>