<p><strong>ಯಮಕನಮರಡಿ:</strong> ಮತಕ್ಷೇತ್ರದ ವ್ಯಾಪ್ತಿಗೆ ಬರುವ, ಸಚಿವ ಸತೀಶ ಜಾರಕಿಹೊಳಿ ಅವರ ಕ್ಷೇತ್ರ ಹೆಬ್ಬಾಳದಲ್ಲಿ 20 ದಿನಗಳಿಂದ ಕುಡಿಯುವ ನೀರು ಪೂರೈಕೆಯಾಗದ ಹಿನ್ನೆಲೆ ಮಹಿಳೆಯರು ಖಾಲಿ ಕೊಡ ಪ್ರದರ್ಶಿಸಿ, ಗ್ರಾಮ ಪಂಚಾಯಿತಿ ಎದುರು ಪ್ರತಿಭಟಿಸಿರು.</p>.<p>‘40 ದಿನಗಳಿಂದ ವಿಪರೀತ ಮಳೆಯಾದರೂ ಗ್ರಾಮಕ್ಕೆ ಕುಡಿಯುವ ನೀರಿಲ್ಲ. ಹಿರಣ್ಯಕೇಶಿ ನದಿಯಿಂದ ಕೇವಲ 1 ಕಿ.ಮೀ ಅಂತರದಲ್ಲಿರುವ ಮತ್ತು ಹಿಡಕಲ್ ಜಲಾಶಯದಿಂದ 14ಕಿ.ಮೀ ದೂರದಲ್ಲಿರುವ ಗ್ರಾಮಕ್ಕೆ ನೀರಿನ ಸಮಸ್ಯೆ ಇದೆ. 15 ಸಾವಿರ ಜನಸಂಖ್ಯೆ ಹೊಂದಿದ ಗ್ರಾಮಕ್ಕೆ 20 ದಿನಕ್ಕೊಮ್ಮೆ ನೀರು ಬಿಟ್ಟರೇ ಹೇಗೆ?’ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಗ್ರಾಮ ಪಂಚಾಯಿತಿ ವಿರುದ್ಧ ಘೋಷಣೆ ಕೂಗಿದ ಮಹಿಳೆಯರು, ಗ್ರಾಮ ಪಂಚಾಯಿತಿ ಕಚೇರಿಯ ಬೀಗ ಜಡಿದು ಪ್ರತಿಭಟಿಸಿದರು. ಹುಕ್ಕೇರಿ ಎಇಇ, ಪಿಡಿಒ, ಗ್ರಾಮ ಪಂಚಾಯಿತಿ ಅಧ್ಯಕ್ಷ, ಸದಸ್ಯರು ಯಾರೂ ಸ್ಥಳಕ್ಕೆ ಭೇಟಿ ನೀಡಲಿಲ್ಲ.</p>.<p>ಮಹಾದೇವಿ ಮಠಪತಿ, ಸುಶವ್ವಾ ಮಾಳಗಿ, ಪೂಜಾ ಮಠಪತಿ, ಜಯಶ್ರೀ ಮಠಪತಿ ಸೇರಿದಂತೆ ಅನೇಕ ಮಹಿಳೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<p>ಲೋಕಸಭಾ ಚುನಾವಣೆಯಲ್ಲಿ ಈ ಗ್ರಾಮದಿಂದ ಕಾಂಗ್ರೆಸ್ ಪಕ್ಷಕ್ಕೆ ಮತದಾನ ಕಡಿಮೆ ಆಗಿರುವುದರಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ </p><p>-ರಾವುಸಾಹೇಬ ಪಾಟೀಲ ಜೆಡಿಎಸ್ ಕಾರ್ಯಕರ್ತ ಹೆಬ್ಬಾಳ </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಮಕನಮರಡಿ:</strong> ಮತಕ್ಷೇತ್ರದ ವ್ಯಾಪ್ತಿಗೆ ಬರುವ, ಸಚಿವ ಸತೀಶ ಜಾರಕಿಹೊಳಿ ಅವರ ಕ್ಷೇತ್ರ ಹೆಬ್ಬಾಳದಲ್ಲಿ 20 ದಿನಗಳಿಂದ ಕುಡಿಯುವ ನೀರು ಪೂರೈಕೆಯಾಗದ ಹಿನ್ನೆಲೆ ಮಹಿಳೆಯರು ಖಾಲಿ ಕೊಡ ಪ್ರದರ್ಶಿಸಿ, ಗ್ರಾಮ ಪಂಚಾಯಿತಿ ಎದುರು ಪ್ರತಿಭಟಿಸಿರು.</p>.<p>‘40 ದಿನಗಳಿಂದ ವಿಪರೀತ ಮಳೆಯಾದರೂ ಗ್ರಾಮಕ್ಕೆ ಕುಡಿಯುವ ನೀರಿಲ್ಲ. ಹಿರಣ್ಯಕೇಶಿ ನದಿಯಿಂದ ಕೇವಲ 1 ಕಿ.ಮೀ ಅಂತರದಲ್ಲಿರುವ ಮತ್ತು ಹಿಡಕಲ್ ಜಲಾಶಯದಿಂದ 14ಕಿ.ಮೀ ದೂರದಲ್ಲಿರುವ ಗ್ರಾಮಕ್ಕೆ ನೀರಿನ ಸಮಸ್ಯೆ ಇದೆ. 15 ಸಾವಿರ ಜನಸಂಖ್ಯೆ ಹೊಂದಿದ ಗ್ರಾಮಕ್ಕೆ 20 ದಿನಕ್ಕೊಮ್ಮೆ ನೀರು ಬಿಟ್ಟರೇ ಹೇಗೆ?’ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಗ್ರಾಮ ಪಂಚಾಯಿತಿ ವಿರುದ್ಧ ಘೋಷಣೆ ಕೂಗಿದ ಮಹಿಳೆಯರು, ಗ್ರಾಮ ಪಂಚಾಯಿತಿ ಕಚೇರಿಯ ಬೀಗ ಜಡಿದು ಪ್ರತಿಭಟಿಸಿದರು. ಹುಕ್ಕೇರಿ ಎಇಇ, ಪಿಡಿಒ, ಗ್ರಾಮ ಪಂಚಾಯಿತಿ ಅಧ್ಯಕ್ಷ, ಸದಸ್ಯರು ಯಾರೂ ಸ್ಥಳಕ್ಕೆ ಭೇಟಿ ನೀಡಲಿಲ್ಲ.</p>.<p>ಮಹಾದೇವಿ ಮಠಪತಿ, ಸುಶವ್ವಾ ಮಾಳಗಿ, ಪೂಜಾ ಮಠಪತಿ, ಜಯಶ್ರೀ ಮಠಪತಿ ಸೇರಿದಂತೆ ಅನೇಕ ಮಹಿಳೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<p>ಲೋಕಸಭಾ ಚುನಾವಣೆಯಲ್ಲಿ ಈ ಗ್ರಾಮದಿಂದ ಕಾಂಗ್ರೆಸ್ ಪಕ್ಷಕ್ಕೆ ಮತದಾನ ಕಡಿಮೆ ಆಗಿರುವುದರಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ </p><p>-ರಾವುಸಾಹೇಬ ಪಾಟೀಲ ಜೆಡಿಎಸ್ ಕಾರ್ಯಕರ್ತ ಹೆಬ್ಬಾಳ </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>