ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊರ ರಾಜ್ಯದ ಕ್ಷೌರಿಕರಿಗೆ ಅನುಮತಿ ನೀಡದಂತೆ ಆಗ್ರಹ

Last Updated 5 ಅಕ್ಟೋಬರ್ 2019, 14:13 IST
ಅಕ್ಷರ ಗಾತ್ರ

ಬೆಳಗಾವಿ: ‘ಹೊರ ರಾಜ್ಯದಿಂದ ಬಂದು ಕರ್ನಾಟಕದಲ್ಲಿ ಕ್ಷೌರಿಕ ವೃತ್ತಿ ಮಾಡುತ್ತಿರುವವರ ಅಂಗಡಿಗಳ ಪರವಾನಗಿ ರದ್ದುಗೊಳಿಸಬೇಕು. ಹೊಸದಾಗಿ ಅನುಮತಿ ಕೊಡಬಾರದು’ ಎಂದು ಆಗ್ರಹಿಸಿ ಹಡಪದ ಅಪ್ಪಣ್ಣ ಸೇವಾ ಸಮಾಜ ಜಿಲ್ಲಾ ಘಟಕದ ನೇತೃತ್ವದಲ್ಲಿ ಸಮಾಜದವರು ಶನಿವಾರ ಪ್ರತಿಭಟನೆ ನಡೆಸಿದರು.

ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಅವರು, ‘ಉತ್ತರಪ್ರದೇಶ, ಬಿಹಾರದ ಬಂಡವಾಳ ಶಾಹಿಗಳು ಇಲ್ಲಿಗೆ ಬಂದು ಅಂಗಡಿಗಳನ್ನು ಆರಂಭಿಸುತ್ತಿದ್ದಾರೆ. ಆ ರಾಜ್ಯದವರನ್ನೇ ಕೆಲಸಕ್ಕೆ ನಿಯೋಜಿಸಿದ್ದಾರೆ. ಇದರಿಂದ ಸ್ಥಳೀಯ ಕ್ಷೌರಿಕರಿಗೆ ತೊಂದರೆಯಾಗುತ್ತಿದೆ. ಈ ವೃತ್ತಿ ಮೂಲಕವೇ ಜೀವನ ಕಟ್ಟಿಕೊಂಡ ಹಡಪದ ಸಮಾಜದ ಮೇಲೆ ಪೆಟ್ಟು ಬೀಳುತ್ತಿದೆ. ಬೇಡಿಕೆಗೆ ಸ್ಪಂದಿಸದಿದ್ದಲ್ಲಿ ಹೋರಾಟ ತೀವ್ರಗೊಳಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಧಾರವಾಡ ಯುವ ಘಟಕದ ಅಧ್ಯಕ್ಷ ಈರಣ್ಣ ಚಿಕ್ಕಬೆಳ್ಳಿಕಟ್ಟಿ ಮಾತನಾಡಿದರು. ಸಮಾಜದ ಎಚ್.ಡಿ ವೈದ್ಯ, ಬಸವರಾಜ ಹಡಪದ, ಮಹಾಂತೇಶ ಹಂಪಣ್ಣವರ, ಸುರೇಶ ಸಡೆಕರ, ಆನಂದ ಕುರ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT