ಏಕಾಏಕಿ ರಾಷ್ಟ್ರೀಯ ಹೆದ್ದಾರಿಗೆ ಅಡ್ಡಬಂದ ಸಂಘಟನೆಯ ಹಲವು ಮುಖಂಡರು ಹಾಗೂ ಕಾರ್ಯಕರ್ತರು, ಹೆದ್ದಾರಿ ಮಧ್ಯೆ ಕುಳಿತು ಸಂಚಾರ ಬಂದ್ ಮಾಡಿಸಿದರು. ‘ಯಾವುದೇ ದಾಖಲೆ, ನೋಟಿಸ್ ಇಲ್ಲದೇ ರಾಷ್ಟ್ರೀಯ ತನಿಖಾ ಸಂಸ್ಥೆಯು ಪಿಎಫ್ಐ ಸಂಘಟನೆಯ ಮುಖಂಡರ ಮನೆಗಳ ಮೇಲೆ ದಾಳಿ ನಡೆಸಿದೆ. ಇದು ಅಮಾನವೀಯ. ಗೃಹಸಚಿವ ಅಮಿತ್ ಶಾ ಅವರ ಸೂಚನೆ ಮೇರೆಗೆ ಈ ದಾಳಿ ನಡೆಯುತ್ತಿದೆ. ಇಂಥ ದಬ್ಬಾಳಿಕೆ ನಡೆಯುವುದಿಲ್ಲ’ ಎಂದು ಘೋಷಣೆ ಕೂಗಿದರು.