ಶಾಸಕ ವಿಶ್ವಾಸ್ ವೈದ್ಯ ಮಾತನಾಡಿ, ರಾಜ್ಯ ಸರ್ಕಾರದ ಶಕ್ತಿ ಯೋಜನೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪುಣ್ಯ ಕ್ಷೇತ್ರ ಹಾಗೂ ಪ್ರೇಕ್ಷಣೀಯ ಸ್ಥಳಗಳಿಗೆ ಮಹಿಳೆಯರು ಉತ್ಸಾಹದಿಂದ ಪ್ರಯಾಣ ಮಾಡುತ್ತಿದ್ದಾರೆ. ಯಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಲು ಆಯ್ದ ದಿನಗಳಲ್ಲಿ ಜನದಟ್ಟಣೆ ಹೆಚ್ಚುತ್ತಿದೆ. ಸಮರ್ಪಕ ಮತ್ತು ನಿಗದಿತ ಸಮಯಕ್ಕೆ ಬಸ್ ಸೇವೆ ಒದಗಿಸಲು ಆದೇಶಿಸಿದರು.