<p><strong>ಬೆಳಗಾವಿ: </strong>‘ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪದಂತೆ ಹಳ್ಳಿಗಳಲ್ಲಿನ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ದೊರೆಯುವಂತೆ ಮಾಡಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಸೂಚಿಸಿದರು.</p>.<p>ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ರುರ್ಬನ್ (ಎನ್ಆರ್ಯುಎಂ) ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಹಳ್ಳಿಯ ವಾತಾವರಣ ಉಳಿಸಿಕೊಂಡು ಪಟ್ಟಣದ ಎಲ್ಲ ಸೌಲಭ್ಯಗಳನ್ನು ಕಲ್ಪಿಸುವ ಗುರಿ ಹೊಂದಿರುವ ಶ್ಯಾಮ್ಪ್ರಸಾದ್ ಮುಖರ್ಜಿ ರುರ್ಬನ್ ಅಭಿಯಾನವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು’ ಎಂದು ನಿರ್ದೇಶನ ನೀಡಿದರು.</p>.<p>‘ಹಳ್ಳಿಗಳಲ್ಲಿ ಚರಂಡಿ ನೀರು ಸಂಸ್ಕರಿಸಿ ಮರುಬಳಕೆಗೆ ಎಸ್ಟಿಪಿ ಘಟಕ ಸ್ಥಾಪಿಸಬೇಕು. ಚರಂಡಿಯ ನೀರು ಕೆರೆ ಅಥವಾ ನದಿಗೆ ಸೇರದಂತೆ ಯೋಜನೆ ರೂಪಿಸಬೇಕು’ ಎಂದು ತಿಳಿಸಿದರು.</p>.<p>‘ಕೊರೊನಾ ವೈರಸ್ ಸೋಂಕಿನಿಂದಾಗಿ ನಗರ ಪ್ರದೇಶಗಳಲ್ಲಿನ ಜನರು ಹಳ್ಳಿಗಳಿಗೆ ವಾಪಸ್ ಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಹಳ್ಳಿಗಳು ದೊಡ್ಡ ಪ್ರಮಾಣದಲ್ಲಿ ಬೆಳೆಯಲಿವೆ. ಮುಂದಿನ 30 ವರ್ಷಗಳನ್ನು ಗುರಿಯಾಗಿಸಿಕೊಂಡು ಈಗಿನಿಂದಲೇ ಯೋಜನೆ ತಯಾರಿಸಬೇಕು’ ಎಂದರು.</p>.<p>‘2016-17ನೇ ಸಾಲಿನಲ್ಲಿ ಆರಂಭವಾದ ಅಭಿಯಾನದಲ್ಲಿ ತಾಲ್ಲೂಕಿನ ಕಂಗ್ರಾಳಿ ಕ್ಲಸ್ಟ್ರ್ ವ್ಯಾಪ್ತಿಯಲ್ಲಿ ಕಂಗ್ರಾಳಿ ಬಿ.ಕೆ., ಕಂಗ್ರಾಳಿ ಕೆ.ಎಚ್., ಮಂಡೋಳಿ ಮತ್ತು ಅಂಬೇವಾಡಿ ಗ್ರಾಮಗಳು ಆಯ್ಕೆಯಾಗಿವೆ. ಮೊದಲ ಹಂತದಲ್ಲಿ ₹ 452.95 ಕೋಟಿ ಬಿಡುಗಡೆಯಾಗಿದೆ. ಆದರೆ, ಕಾಮಗಾರಿಗಳು ನಿಗದಿತ ಸಮಯದಲ್ಲಿ ಪೂರ್ಣಗೊಂಡಿಲ್ಲದಿರುವುದು ಸರಿಯಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ವಿ. ರಾಜೇಂದ್ರ, ‘ಆಯ್ಕೆಯಾಗಿರುವ ಗ್ರಾಮಗಳ ಸಮಗ್ರ ಅಭಿವೃದ್ಧಿ ಯೋಜನೆಯನ್ನು ಜುಲೈ 10ರ ಒಳಗೆ ಸಲ್ಲಿಸಬೇಕು. ಗ್ರಾಮೀಣ ಕುಡಿಯುವ ನೀರಿನ ಕಾಮಗಾರಿಗಳನ್ನು ನಿಗದಿತ ಕಾಲಾವಧಿಯಲ್ಲೇ ಪೂರ್ಣಗೊಳಿಸಬೇಕು’ ಎಂದು ತಾಕೀತು ಮಾಡಿದರು.</p>.<p>ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆಶಾ ಐಹೊಳೆ, ಉಪಾಧ್ಯಕ್ಷ ಅರುಣ ಕಟಾಂಬಳೆ, ಮುಖ್ಯ ಲೆಕ್ಕಾಧಿಕಾರಿ ಪರುಶರಾಮ ದುಡಗುಂಟಿ, ಯೋಜನಾ ನಿರ್ದೇಶಕ ಎ.ಎಂ. ಪಾಟೀಲ, ಜಂಟಿ ಕೃಷಿ ನಿದೇಶಕ ಜಿಲಾನಿ ಮೊಕಾಶಿ ಇದ್ದರು.</p>.<p>ಇದಕ್ಕೂ ಮುನ್ನ ಸಚಿವರು, ಸ್ವಚ್ಛ ಭಾರತ ಅಭಿಯಾನದಲ್ಲಿ ತ್ಯಾಜ್ಯ ವಿಲೇವಾರಿಗೆ ಒದಗಿಸಲಾದ ವಾಹನಗಳನ್ನು 19 ಗ್ರಾಮ ಪಂಚಾಯಿತಿಗಳ ಪಿಡಿಒಗಳಿಗೆ ಹಸ್ತಾಂತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>‘ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪದಂತೆ ಹಳ್ಳಿಗಳಲ್ಲಿನ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ದೊರೆಯುವಂತೆ ಮಾಡಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಸೂಚಿಸಿದರು.</p>.<p>ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ರುರ್ಬನ್ (ಎನ್ಆರ್ಯುಎಂ) ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಹಳ್ಳಿಯ ವಾತಾವರಣ ಉಳಿಸಿಕೊಂಡು ಪಟ್ಟಣದ ಎಲ್ಲ ಸೌಲಭ್ಯಗಳನ್ನು ಕಲ್ಪಿಸುವ ಗುರಿ ಹೊಂದಿರುವ ಶ್ಯಾಮ್ಪ್ರಸಾದ್ ಮುಖರ್ಜಿ ರುರ್ಬನ್ ಅಭಿಯಾನವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು’ ಎಂದು ನಿರ್ದೇಶನ ನೀಡಿದರು.</p>.<p>‘ಹಳ್ಳಿಗಳಲ್ಲಿ ಚರಂಡಿ ನೀರು ಸಂಸ್ಕರಿಸಿ ಮರುಬಳಕೆಗೆ ಎಸ್ಟಿಪಿ ಘಟಕ ಸ್ಥಾಪಿಸಬೇಕು. ಚರಂಡಿಯ ನೀರು ಕೆರೆ ಅಥವಾ ನದಿಗೆ ಸೇರದಂತೆ ಯೋಜನೆ ರೂಪಿಸಬೇಕು’ ಎಂದು ತಿಳಿಸಿದರು.</p>.<p>‘ಕೊರೊನಾ ವೈರಸ್ ಸೋಂಕಿನಿಂದಾಗಿ ನಗರ ಪ್ರದೇಶಗಳಲ್ಲಿನ ಜನರು ಹಳ್ಳಿಗಳಿಗೆ ವಾಪಸ್ ಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಹಳ್ಳಿಗಳು ದೊಡ್ಡ ಪ್ರಮಾಣದಲ್ಲಿ ಬೆಳೆಯಲಿವೆ. ಮುಂದಿನ 30 ವರ್ಷಗಳನ್ನು ಗುರಿಯಾಗಿಸಿಕೊಂಡು ಈಗಿನಿಂದಲೇ ಯೋಜನೆ ತಯಾರಿಸಬೇಕು’ ಎಂದರು.</p>.<p>‘2016-17ನೇ ಸಾಲಿನಲ್ಲಿ ಆರಂಭವಾದ ಅಭಿಯಾನದಲ್ಲಿ ತಾಲ್ಲೂಕಿನ ಕಂಗ್ರಾಳಿ ಕ್ಲಸ್ಟ್ರ್ ವ್ಯಾಪ್ತಿಯಲ್ಲಿ ಕಂಗ್ರಾಳಿ ಬಿ.ಕೆ., ಕಂಗ್ರಾಳಿ ಕೆ.ಎಚ್., ಮಂಡೋಳಿ ಮತ್ತು ಅಂಬೇವಾಡಿ ಗ್ರಾಮಗಳು ಆಯ್ಕೆಯಾಗಿವೆ. ಮೊದಲ ಹಂತದಲ್ಲಿ ₹ 452.95 ಕೋಟಿ ಬಿಡುಗಡೆಯಾಗಿದೆ. ಆದರೆ, ಕಾಮಗಾರಿಗಳು ನಿಗದಿತ ಸಮಯದಲ್ಲಿ ಪೂರ್ಣಗೊಂಡಿಲ್ಲದಿರುವುದು ಸರಿಯಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ವಿ. ರಾಜೇಂದ್ರ, ‘ಆಯ್ಕೆಯಾಗಿರುವ ಗ್ರಾಮಗಳ ಸಮಗ್ರ ಅಭಿವೃದ್ಧಿ ಯೋಜನೆಯನ್ನು ಜುಲೈ 10ರ ಒಳಗೆ ಸಲ್ಲಿಸಬೇಕು. ಗ್ರಾಮೀಣ ಕುಡಿಯುವ ನೀರಿನ ಕಾಮಗಾರಿಗಳನ್ನು ನಿಗದಿತ ಕಾಲಾವಧಿಯಲ್ಲೇ ಪೂರ್ಣಗೊಳಿಸಬೇಕು’ ಎಂದು ತಾಕೀತು ಮಾಡಿದರು.</p>.<p>ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆಶಾ ಐಹೊಳೆ, ಉಪಾಧ್ಯಕ್ಷ ಅರುಣ ಕಟಾಂಬಳೆ, ಮುಖ್ಯ ಲೆಕ್ಕಾಧಿಕಾರಿ ಪರುಶರಾಮ ದುಡಗುಂಟಿ, ಯೋಜನಾ ನಿರ್ದೇಶಕ ಎ.ಎಂ. ಪಾಟೀಲ, ಜಂಟಿ ಕೃಷಿ ನಿದೇಶಕ ಜಿಲಾನಿ ಮೊಕಾಶಿ ಇದ್ದರು.</p>.<p>ಇದಕ್ಕೂ ಮುನ್ನ ಸಚಿವರು, ಸ್ವಚ್ಛ ಭಾರತ ಅಭಿಯಾನದಲ್ಲಿ ತ್ಯಾಜ್ಯ ವಿಲೇವಾರಿಗೆ ಒದಗಿಸಲಾದ ವಾಹನಗಳನ್ನು 19 ಗ್ರಾಮ ಪಂಚಾಯಿತಿಗಳ ಪಿಡಿಒಗಳಿಗೆ ಹಸ್ತಾಂತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>