<p><strong>ಬೆಳಗಾವಿ</strong>: ನಾಗರಿಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಇಲ್ಲಿ ಗುರುವಾರ ನಡೆದ ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆ ವೇಳೆ ವಿಗ್ ಹಾಕಿಕೊಂಡು ‘ಹೆಚ್ಚಿನ ಎತ್ತರ’ ತೋರಿಸಲು ಮುಂದಾಗಿ ‘ನೇಮಕಾತಿ ಪ್ರಾಧಿಕಾರಕ್ಕೆ ಮೋಸ ಮಾಡಲು ಪ್ರಯತ್ನಿಸಿದ’ ಇಬ್ಬರ ಮೇಲೆ ಪ್ರಕರಣ ದಾಖಲಾಗಿದೆ.</p>.<p>ಚಿಕ್ಕೋಡಿ ತಾಲ್ಲೂಕಿನ ಜಾಗನೂರದ ಬಾಳೇಶ ದುರದುಂಡಿ ಹಾಗೂ ಮೂಡಲಗಿ ತಾಲ್ಲೂಕು ಕುಲಗೋಡದ ಉಮೇಶ ಎನ್ಆರೋಪಿಗಳು.</p>.<p>ತಾಲ್ಲೂಕಿನ ಮಚ್ಚೆಯ ಕೆಎಸ್ಆರ್ಪಿ 2ನೇ ಪಡೆಯಲ್ಲಿ ನಡೆದ ಪರೀಕ್ಷೆ ವೇಳೆ ಬಾಳೇಶ, ವಿಗ್ ಹಾಕಿಕೊಂಡು ಅದರೊಳಗೆ ಥರ್ಮಾಕೋಲ್ನ 3 ತುಣುಕುಗಳನ್ನು ಹಾಕಿಕೊಂಡು ಎತ್ತರ ತೋರಿಸಲು ಯತ್ನಿಸಿದ್ದು ಗೊತ್ತಾಗಿದೆ. ಅವರ ವಿರುದ್ಧ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಮತ್ತೊಬ್ಬ ಆರೋಪಿ ಉಮೇಶ ನಗರದ ಡಿ.ಎ.ಆರ್. ಮೈದಾನದಲ್ಲಿ ನಡೆದ ಪರೀಕ್ಷೆ ಕಾಲಕ್ಕೆ ವಿಗ್ ಹಾಗೂಥರ್ಮಾಕೋಲ್ಬಳಸಿಸಿಕ್ಕಿಬಿದ್ದಿದ್ದಾರೆ. ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಡಿಸಿಪಿ ವಿಕ್ರಂ ಅಮಟೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ನಾಗರಿಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಇಲ್ಲಿ ಗುರುವಾರ ನಡೆದ ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆ ವೇಳೆ ವಿಗ್ ಹಾಕಿಕೊಂಡು ‘ಹೆಚ್ಚಿನ ಎತ್ತರ’ ತೋರಿಸಲು ಮುಂದಾಗಿ ‘ನೇಮಕಾತಿ ಪ್ರಾಧಿಕಾರಕ್ಕೆ ಮೋಸ ಮಾಡಲು ಪ್ರಯತ್ನಿಸಿದ’ ಇಬ್ಬರ ಮೇಲೆ ಪ್ರಕರಣ ದಾಖಲಾಗಿದೆ.</p>.<p>ಚಿಕ್ಕೋಡಿ ತಾಲ್ಲೂಕಿನ ಜಾಗನೂರದ ಬಾಳೇಶ ದುರದುಂಡಿ ಹಾಗೂ ಮೂಡಲಗಿ ತಾಲ್ಲೂಕು ಕುಲಗೋಡದ ಉಮೇಶ ಎನ್ಆರೋಪಿಗಳು.</p>.<p>ತಾಲ್ಲೂಕಿನ ಮಚ್ಚೆಯ ಕೆಎಸ್ಆರ್ಪಿ 2ನೇ ಪಡೆಯಲ್ಲಿ ನಡೆದ ಪರೀಕ್ಷೆ ವೇಳೆ ಬಾಳೇಶ, ವಿಗ್ ಹಾಕಿಕೊಂಡು ಅದರೊಳಗೆ ಥರ್ಮಾಕೋಲ್ನ 3 ತುಣುಕುಗಳನ್ನು ಹಾಕಿಕೊಂಡು ಎತ್ತರ ತೋರಿಸಲು ಯತ್ನಿಸಿದ್ದು ಗೊತ್ತಾಗಿದೆ. ಅವರ ವಿರುದ್ಧ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಮತ್ತೊಬ್ಬ ಆರೋಪಿ ಉಮೇಶ ನಗರದ ಡಿ.ಎ.ಆರ್. ಮೈದಾನದಲ್ಲಿ ನಡೆದ ಪರೀಕ್ಷೆ ಕಾಲಕ್ಕೆ ವಿಗ್ ಹಾಗೂಥರ್ಮಾಕೋಲ್ಬಳಸಿಸಿಕ್ಕಿಬಿದ್ದಿದ್ದಾರೆ. ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಡಿಸಿಪಿ ವಿಕ್ರಂ ಅಮಟೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>