<p><strong>ಬೆಳಗಾವಿ</strong>: ‘545 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ಇನ್ನೂ ಮುಂದುವರಿದಿದೆ. ನ್ಯಾಯಾಲಯದಲ್ಲಿ ಪ್ರಕರಣ ಇತ್ಯರ್ಥವಾದ ನಂತರ ಸರ್ಕಾರವು ತನ್ನ ನಿಲುವು ಪ್ರಕಟಿಸಲಿದೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.</p>.<p>‘ಪಿಎಸ್ಐ ನೇಮಕಾತಿಗೆ ಸಂಬಂಧಿಸಿದಂತೆ ಯಾವುದೇ ಕಾರಣಕ್ಕೂ ಮರುಪರೀಕ್ಷೆ ಮಾಡಬಾರದು. ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಆಯ್ಕೆಯಾದವರಿಗೆ ನೇಮಕಾತಿ ಆದೇಶ ನೀಡಬೇಕು’ ಎಂದು ಒತ್ತಾಯಿಸಿ, ಇಲ್ಲಿನ ಸುವರ್ಣ ಸೌಧದ ಎದುರು ಹಲವು ಅಭ್ಯರ್ಥಿಗಳು ಶುಕ್ರವಾರ ನಡೆಸಿದ ಪ್ರತಿಭಟನಾ ಸ್ಥಳದಲ್ಲಿ ಅವರು ಮಾತನಾಡಿದರು.</p>.<p>‘ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಆಯ್ಕೆಯಾದವರ ನೋವು ನನಗೂ ಅರ್ಥವಾಗುತ್ತದೆ. ಆದರೆ, ಸಿಐಡಿ ತಂಡ ಗುರುವಾರ ಈ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಬಂಧಿಸಿದೆ. ಹೀಗಾಗಿ, ತನಿಖೆ ಪೂರ್ಣವಾಗುವವರೆಗೂ ನಾವು ಕಾಯಬೇಕಾಗುತ್ತದೆ’ ಎಂದರು.</p>.<p>ನಮ್ಮ ಭವಿಷ್ಯದ ಕತೆ ಏನು?</p>.<p>‘ತನಿಖೆ ಅಂತಿಮ ಹಂತಕ್ಕೆ ಬಂದಿದ್ದು, ಅಕ್ರಮ ಎಸಗಿದವರನ್ನು ಡಿಬಾರ್ ಮಾಡಲಾಗುವುದು ಎಂದು ನೇಮಕಾತಿ ವಿಭಾಗದ ಹಿರಿಯ ಅಧಿಕಾರಿ ತಿಳಿಸಿದ್ದಾರೆ. ಆದರೆ, ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಆಯ್ಕೆಯಾದ ನಮ್ಮ ಭವಿಷ್ಯದ ಕತೆ ಏನು? ಯಾರೋ ಮಾಡಿದ ತಪ್ಪಿಗೆ ನಾವೂ ಬೆಲೆ ತೆರಬೇಕೇ? ಪ್ರಾಮಾಣಿಕರಿಗೆ ನೇಮಕಾತಿ ಆದೇಶ ಕೊಡದಿರಲು ಕಾರಣವೇನು’ ಎಂದು ಅಭ್ಯರ್ಥಿಗಳು ಪ್ರಶ್ನಿಸಿದರು.</p>.<p>ಅಭ್ಯರ್ಥಿಗಳಾದ ವಿನಾಯಕ ಬಿ.ಡಿ, ಅಮರನಾಥ, ಸಂತೋಷ ಕಾಂಬಳೆ, ಪಿ.ಕೆ.ಸಾಗರ್, ಮಂಜುಳಾ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘545 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ಇನ್ನೂ ಮುಂದುವರಿದಿದೆ. ನ್ಯಾಯಾಲಯದಲ್ಲಿ ಪ್ರಕರಣ ಇತ್ಯರ್ಥವಾದ ನಂತರ ಸರ್ಕಾರವು ತನ್ನ ನಿಲುವು ಪ್ರಕಟಿಸಲಿದೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.</p>.<p>‘ಪಿಎಸ್ಐ ನೇಮಕಾತಿಗೆ ಸಂಬಂಧಿಸಿದಂತೆ ಯಾವುದೇ ಕಾರಣಕ್ಕೂ ಮರುಪರೀಕ್ಷೆ ಮಾಡಬಾರದು. ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಆಯ್ಕೆಯಾದವರಿಗೆ ನೇಮಕಾತಿ ಆದೇಶ ನೀಡಬೇಕು’ ಎಂದು ಒತ್ತಾಯಿಸಿ, ಇಲ್ಲಿನ ಸುವರ್ಣ ಸೌಧದ ಎದುರು ಹಲವು ಅಭ್ಯರ್ಥಿಗಳು ಶುಕ್ರವಾರ ನಡೆಸಿದ ಪ್ರತಿಭಟನಾ ಸ್ಥಳದಲ್ಲಿ ಅವರು ಮಾತನಾಡಿದರು.</p>.<p>‘ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಆಯ್ಕೆಯಾದವರ ನೋವು ನನಗೂ ಅರ್ಥವಾಗುತ್ತದೆ. ಆದರೆ, ಸಿಐಡಿ ತಂಡ ಗುರುವಾರ ಈ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಬಂಧಿಸಿದೆ. ಹೀಗಾಗಿ, ತನಿಖೆ ಪೂರ್ಣವಾಗುವವರೆಗೂ ನಾವು ಕಾಯಬೇಕಾಗುತ್ತದೆ’ ಎಂದರು.</p>.<p>ನಮ್ಮ ಭವಿಷ್ಯದ ಕತೆ ಏನು?</p>.<p>‘ತನಿಖೆ ಅಂತಿಮ ಹಂತಕ್ಕೆ ಬಂದಿದ್ದು, ಅಕ್ರಮ ಎಸಗಿದವರನ್ನು ಡಿಬಾರ್ ಮಾಡಲಾಗುವುದು ಎಂದು ನೇಮಕಾತಿ ವಿಭಾಗದ ಹಿರಿಯ ಅಧಿಕಾರಿ ತಿಳಿಸಿದ್ದಾರೆ. ಆದರೆ, ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಆಯ್ಕೆಯಾದ ನಮ್ಮ ಭವಿಷ್ಯದ ಕತೆ ಏನು? ಯಾರೋ ಮಾಡಿದ ತಪ್ಪಿಗೆ ನಾವೂ ಬೆಲೆ ತೆರಬೇಕೇ? ಪ್ರಾಮಾಣಿಕರಿಗೆ ನೇಮಕಾತಿ ಆದೇಶ ಕೊಡದಿರಲು ಕಾರಣವೇನು’ ಎಂದು ಅಭ್ಯರ್ಥಿಗಳು ಪ್ರಶ್ನಿಸಿದರು.</p>.<p>ಅಭ್ಯರ್ಥಿಗಳಾದ ವಿನಾಯಕ ಬಿ.ಡಿ, ಅಮರನಾಥ, ಸಂತೋಷ ಕಾಂಬಳೆ, ಪಿ.ಕೆ.ಸಾಗರ್, ಮಂಜುಳಾ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>