ಸಮಿತಿಯು ಕಳೆದ 22 ವರ್ಷಗಳಿಂದ ಪುಟ್ಟರಾಜ ಗವಾಯಿಗಳ ಗೌರವಾರ್ಥ ಈ ಪ್ರಶಸ್ತಿ ನೀಡುತ್ತ ಬಂದಿದೆ. ಪಂ.ಪುಟ್ಟರಾಜ ಸಾಹಿತ್ಯ ಪುರಸ್ಕಾರ ರಾಜ್ಯ ಪ್ರಶಸ್ತಿಗೆ ಬೆಂಗಳೂರಿನ ರೇಣುಕಾ ಕೋಡಗುಂಟಿ ಅವರ ‘ನಿಲುಗನ್ನಡಿ’ ಕಥಾ ಸಂಕಲನ ಆಯ್ಕೆಯಾಗಿದೆ. ಇದರೊಂದಿಗೆ ‘ವರ್ಷದ ಶೇಷ್ಠ ಕೃತಿ ರತ್ನ’ ಪ್ರಶಸ್ತಿಗೆ ರಾಜ್ಯ ಹಾಗೂ ಹೊರರಾಜ್ಯದ ಹಲವು ಲೇಖಕರ ಕೃತಿಗಳನ್ನು ಆಯ್ಕೆ ಮಾಡಲಾಗಿದೆ.