<p><strong>ಬೆಳಗಾವಿ</strong>: ‘ತಾಲ್ಲೂಕಿನ ಸಂತಿ ಬಸ್ತವಾಡದ ಮಸೀದಿಯಲ್ಲಿದ್ದ ಕುರ್ಆನ್ ಮತ್ತು ಹದೀಸ್ಗಳನ್ನು ಸುಟ್ಟ ಪ್ರಕರಣಕ್ಕೆ ಸಂಬಂಧಿಸಿ, ಬಕ್ರೀದ್ನೊಳಗೆ ಆರೋಪಿಗಳನ್ನು ಬಂಧಿಸಬೇಕು’ ಎಂದು ಒತ್ತಾಯಿಸಿ, ಮುಹಫಿಝ್–ಇ–ಕುರ್ಆನ್ ಯೂಥ್ ಕಮಿಟಿ ನೇತೃತ್ವದಲ್ಲಿ ಮುಸ್ಲಿಮರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು. </p><p>‘ಈ ಪ್ರಕರಣದಲ್ಲಿ ಪೊಲೀಸರು ತನಿಖೆ ವಿಳಂಬ ಮಾಡುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p><p>‘ಈ ಘಟನೆ ನಡೆದು 20 ದಿನಗಳಾದರೂ ಆರೋಪಿಗಳ ಬಂಧನವಾಗಿರುವುದು ಅನುಮಾನಕ್ಕೆ ಕಾರಣವಾಗಿದೆ. ಈ ಮಧ್ಯೆ ಸಂತಿ ಬಸ್ತವಾಡದಲ್ಲಿನ ಹಿಂದೂ ಮುಖಂಡರು ಗ್ರಾಮಸ್ಥರಿಗೆ ತಪ್ಪು ಸಂದೇಶ ನೀಡಿ, ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ ಹಾಕಿದ್ದಾರೆ. ಅವರೊಂದಿಗೆ ಯಾವುದೇ ವ್ಯವಹಾರ ಮಾಡಬಾರದು ಎಂದು ತಿಳಿಸಿ, ಕೋಮು ಸಾಮರಸ್ಯ ಕದಡುತ್ತಿದ್ದಾರೆ. ಊರಲ್ಲಿ ಅಶಾಂತಿ ಉಂಟುಮಾಡುವ ಹುನ್ನಾರ ನಡೆಸಿದ್ದಾರೆ’ ಎಂದು ಆರೋಪಿಸಿದರು.</p><p>‘ಕುರ್ಆನ್ ಮಾತ್ರವಲ್ಲ; ಭಗವದ್ಗೀತೆ ಮತ್ತು ಬೈಬಲ್ಗೆ ಯಾರಾದರೂ ಹಾನಿ ಮಾಡಿದರೂ ತಕ್ಷಣವೇ ಬಂಧಿಸಿ, ಕಾನೂನು ಕ್ರಮ ಜರುಗಿಸುವ ಕೆಲಸವಾಗಬೇಕು. ಹೀಗಿರುವಾಗ ಈ ಪ್ರಕರಣದಲ್ಲಿ ತಡಮಾಡದೆ ಆರೋಪಿಗಳನ್ನು ಬಂಧಿಸಬೇಕು. ತನಿಖೆ ವಿಳಂಬವಾದರೆ ಹೋರಾಟ ತೀವ್ರ ಸ್ವರೂಪ ಪಡೆಯಲಿದೆ’ ಎಂದು ಎಚ್ಚರಿಕೆ ಕೊಟ್ಟರು.</p><p>‘ಸಂತಿ ಬಸ್ತವಾಡದಲ್ಲಿ ಮುಸ್ಲಿಮರ ಭಾವನೆಗೆ ಧಕ್ಕೆ ತರುವಂಥ ಘಟನೆ ನಿರಂತರವಾಗಿ ನಡೆಯುತ್ತಲೇ ಇವೆ. ಆದರೆ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುತ್ತಿಲ್ಲ’ ಎಂದು ದೂರಿದರು. </p><p>ತಮ್ಮ ಬೇಡಿಕೆ ಈಡೇರಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ತಾಲ್ಲೂಕಿನ ಸಂತಿ ಬಸ್ತವಾಡದ ಮಸೀದಿಯಲ್ಲಿದ್ದ ಕುರ್ಆನ್ ಮತ್ತು ಹದೀಸ್ಗಳನ್ನು ಸುಟ್ಟ ಪ್ರಕರಣಕ್ಕೆ ಸಂಬಂಧಿಸಿ, ಬಕ್ರೀದ್ನೊಳಗೆ ಆರೋಪಿಗಳನ್ನು ಬಂಧಿಸಬೇಕು’ ಎಂದು ಒತ್ತಾಯಿಸಿ, ಮುಹಫಿಝ್–ಇ–ಕುರ್ಆನ್ ಯೂಥ್ ಕಮಿಟಿ ನೇತೃತ್ವದಲ್ಲಿ ಮುಸ್ಲಿಮರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು. </p><p>‘ಈ ಪ್ರಕರಣದಲ್ಲಿ ಪೊಲೀಸರು ತನಿಖೆ ವಿಳಂಬ ಮಾಡುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p><p>‘ಈ ಘಟನೆ ನಡೆದು 20 ದಿನಗಳಾದರೂ ಆರೋಪಿಗಳ ಬಂಧನವಾಗಿರುವುದು ಅನುಮಾನಕ್ಕೆ ಕಾರಣವಾಗಿದೆ. ಈ ಮಧ್ಯೆ ಸಂತಿ ಬಸ್ತವಾಡದಲ್ಲಿನ ಹಿಂದೂ ಮುಖಂಡರು ಗ್ರಾಮಸ್ಥರಿಗೆ ತಪ್ಪು ಸಂದೇಶ ನೀಡಿ, ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ ಹಾಕಿದ್ದಾರೆ. ಅವರೊಂದಿಗೆ ಯಾವುದೇ ವ್ಯವಹಾರ ಮಾಡಬಾರದು ಎಂದು ತಿಳಿಸಿ, ಕೋಮು ಸಾಮರಸ್ಯ ಕದಡುತ್ತಿದ್ದಾರೆ. ಊರಲ್ಲಿ ಅಶಾಂತಿ ಉಂಟುಮಾಡುವ ಹುನ್ನಾರ ನಡೆಸಿದ್ದಾರೆ’ ಎಂದು ಆರೋಪಿಸಿದರು.</p><p>‘ಕುರ್ಆನ್ ಮಾತ್ರವಲ್ಲ; ಭಗವದ್ಗೀತೆ ಮತ್ತು ಬೈಬಲ್ಗೆ ಯಾರಾದರೂ ಹಾನಿ ಮಾಡಿದರೂ ತಕ್ಷಣವೇ ಬಂಧಿಸಿ, ಕಾನೂನು ಕ್ರಮ ಜರುಗಿಸುವ ಕೆಲಸವಾಗಬೇಕು. ಹೀಗಿರುವಾಗ ಈ ಪ್ರಕರಣದಲ್ಲಿ ತಡಮಾಡದೆ ಆರೋಪಿಗಳನ್ನು ಬಂಧಿಸಬೇಕು. ತನಿಖೆ ವಿಳಂಬವಾದರೆ ಹೋರಾಟ ತೀವ್ರ ಸ್ವರೂಪ ಪಡೆಯಲಿದೆ’ ಎಂದು ಎಚ್ಚರಿಕೆ ಕೊಟ್ಟರು.</p><p>‘ಸಂತಿ ಬಸ್ತವಾಡದಲ್ಲಿ ಮುಸ್ಲಿಮರ ಭಾವನೆಗೆ ಧಕ್ಕೆ ತರುವಂಥ ಘಟನೆ ನಿರಂತರವಾಗಿ ನಡೆಯುತ್ತಲೇ ಇವೆ. ಆದರೆ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುತ್ತಿಲ್ಲ’ ಎಂದು ದೂರಿದರು. </p><p>ತಮ್ಮ ಬೇಡಿಕೆ ಈಡೇರಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>