ಟಿಕೆಟ್– ಅಭಿಪ್ರಾಯ ತಿಳಿಸಿದ್ದೇನೆ: ‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಟಿಕೆಟ್ ವಿಷಯದಲ್ಲಿ ಚರ್ಚೆ ಯಾಗಿದೆ. ನಾನೂ ಆ ಸಮಿತಿಯಲ್ಲಿದ್ದು, ನನ್ನ ಅಭಿಪ್ರಾಯ ತಿಳಿಸಿದ್ದೇನೆ. ಪಕ್ಷದ ಉಸ್ತುವಾರಿ ಅರುಣ್ ಸಿಂಗ್ ಅವರೊಂದಿಗೆ ಚರ್ಚಿಸಿದ್ದೇನೆ. ಯಾರಿಗೆ ಕೊಟ್ಟರೆ ಒಳ್ಳೆಯದು ಎನ್ನುವ ನಿಟ್ಟಿನಲ್ಲಿ ನನ್ನ ಅಭಿಪ್ರಾಯ ತಿಳಿಸಿದ್ದೇನೆ. ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಹೈಕಮಾಂಡ್ ಯಾವ ತೀರ್ಮಾನ ಮಾಡಲಿದೆ ನೋಡೋಣ’ ಎಂದು ಅಶೋಕ ಅವರು ಹೇಳಿದರು.