ಬೆಳಗಾವಿ: ‘ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಯಿಂದ ಆರ್. ಶಂಕರ್ ಅವರಿಗೆ ಟಿಕೆಟ್ ಸಿಗುತ್ತದೆ ಎನ್ನುವ ಸಂಪೂರ್ಣ ವಿಶ್ವಾಸವಿದೆ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಇಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಎಂ.ಟಿ.ಬಿ. ನಾಗರಾಜ್ ಹಾಗೂ ಎಚ್.ವಿಶ್ವನಾಥ್ ಅವರನ್ನೂ ಹೈಕಮಾಂಡ್ ಪರಿಗಣಿಸುತ್ತದೆ ಎನ್ನುವ ಆಶಾಭಾವವಿದೆ. ನಾನು, ಕಾಂಗ್ರೆಸ್ಗೆ ರಾಜೀನಾಮೆ ನೀಡಿ ಬಿಜೆಪಿಗೆ ಬಂದ ನಾಯಕರ ಪರವಾಗಿದ್ದೇನೆ’ ಎಂದರು.