<p><strong>ಅಥಣಿ (ಬೆಳಗಾವಿ ಜಿಲ್ಲೆ): </strong>ಇಲ್ಲಿನ ಬ್ಲಾಕ್ ಕಾಂಗ್ರೆಸ್ ಮುಖಂಡರು ಪುರಸಭೆ ಆವರಣದಲ್ಲಿ 50 ಪೌರಕಾರ್ಮಿಕರ ಪಾದ ಪೂಜಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜನ್ಮದಿನವನ್ನು ವಿನೂತನವಾಗಿ ಶನಿವಾರ ಆಚರಿಸಿದರು.</p>.<p>‘ಬಸವಣ್ಣನವರ ಕಾಯಕವೇ ಕೈಲಾಸ ಎಂಬ ಮಾತಿನಂತೆ ನಿಜ ಶ್ರಮಜೀವಿಗಳಾದ ಪೌರಕಾರ್ಮಿಕರ ಪಾದ ಪೂಜೆ ಮಾಡುವುದು ನಿಜವಾದ ಪರಮಾತ್ಮನನ್ನು ಪೂಜಿಸಿದಂತೆಯೇ’ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದಾರ್ಥ ಸಿಂಗೆ ಹೇಳಿದರು.</p>.<p>ಪೌರಕಾರ್ಮಿಕರಿಗೆ ಅಭಿನಂದನಾ ಪತ್ರವನ್ನೂ ನೀಡಲಾಯಿತು.</p>.<p>ಮುಖಂಡ ಗಜಾನನ ಮಂಗಸೂಳಿ, ‘ಕೋವಿಡ್ ಭೀತಿ ನಡುವೆಯೂ ಪೌರಕಾರ್ಮಿಕರು ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ. ಅವರ ಕಾರ್ಯ ಶ್ಲಾಘನೀಯ’ ಎಂದರು.</p>.<p>ಮುಖಂಡ ಸುನಿಲ ಸಂಕ, ಪೌರಕಾರ್ಮಿಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಕಾಂಬಳೆ, ಪುರಸಭೆ ಮುಖ್ಯಾಧಿಕಾರಿ ಈರಣ್ಣ ದಡ್ಡಿ ಮಾತನಾಡಿದರು.</p>.<p>ಮುಖಂಡರಾದ ಅನಿಲ ಸುಣದೋಳಿ, ಧರೆಪ್ಪ ಠಕ್ಕಣ್ಣವರ, ಬಸವರಾಜ ಬುಟಾಳಿ, ರಾಬಸಾಬ ಐಹೊಳೆ, ಅಸ್ಲಂ ನಾಲಬಂದ, ರಾಜು ಜಮಖಂಡಿಕರ, ನಿಶಾಂತ ದಳವಾಯಿ, ಶ್ರೀಕಾಂತ ಪೂಜಾರಿ, ಗೌತಮ ಪರಾಂಜಪೆ, ವಿಲೀನರಾಜ ಯಳಮಲ್ಲೆ, ಕಪಿಲ ಘಟಕಾಂಬಳೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಥಣಿ (ಬೆಳಗಾವಿ ಜಿಲ್ಲೆ): </strong>ಇಲ್ಲಿನ ಬ್ಲಾಕ್ ಕಾಂಗ್ರೆಸ್ ಮುಖಂಡರು ಪುರಸಭೆ ಆವರಣದಲ್ಲಿ 50 ಪೌರಕಾರ್ಮಿಕರ ಪಾದ ಪೂಜಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜನ್ಮದಿನವನ್ನು ವಿನೂತನವಾಗಿ ಶನಿವಾರ ಆಚರಿಸಿದರು.</p>.<p>‘ಬಸವಣ್ಣನವರ ಕಾಯಕವೇ ಕೈಲಾಸ ಎಂಬ ಮಾತಿನಂತೆ ನಿಜ ಶ್ರಮಜೀವಿಗಳಾದ ಪೌರಕಾರ್ಮಿಕರ ಪಾದ ಪೂಜೆ ಮಾಡುವುದು ನಿಜವಾದ ಪರಮಾತ್ಮನನ್ನು ಪೂಜಿಸಿದಂತೆಯೇ’ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದಾರ್ಥ ಸಿಂಗೆ ಹೇಳಿದರು.</p>.<p>ಪೌರಕಾರ್ಮಿಕರಿಗೆ ಅಭಿನಂದನಾ ಪತ್ರವನ್ನೂ ನೀಡಲಾಯಿತು.</p>.<p>ಮುಖಂಡ ಗಜಾನನ ಮಂಗಸೂಳಿ, ‘ಕೋವಿಡ್ ಭೀತಿ ನಡುವೆಯೂ ಪೌರಕಾರ್ಮಿಕರು ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ. ಅವರ ಕಾರ್ಯ ಶ್ಲಾಘನೀಯ’ ಎಂದರು.</p>.<p>ಮುಖಂಡ ಸುನಿಲ ಸಂಕ, ಪೌರಕಾರ್ಮಿಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಕಾಂಬಳೆ, ಪುರಸಭೆ ಮುಖ್ಯಾಧಿಕಾರಿ ಈರಣ್ಣ ದಡ್ಡಿ ಮಾತನಾಡಿದರು.</p>.<p>ಮುಖಂಡರಾದ ಅನಿಲ ಸುಣದೋಳಿ, ಧರೆಪ್ಪ ಠಕ್ಕಣ್ಣವರ, ಬಸವರಾಜ ಬುಟಾಳಿ, ರಾಬಸಾಬ ಐಹೊಳೆ, ಅಸ್ಲಂ ನಾಲಬಂದ, ರಾಜು ಜಮಖಂಡಿಕರ, ನಿಶಾಂತ ದಳವಾಯಿ, ಶ್ರೀಕಾಂತ ಪೂಜಾರಿ, ಗೌತಮ ಪರಾಂಜಪೆ, ವಿಲೀನರಾಜ ಯಳಮಲ್ಲೆ, ಕಪಿಲ ಘಟಕಾಂಬಳೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>