<p><strong>ರಾಯಬಾಗ (ಬೆಳಗಾವಿ ಜಿಲ್ಲೆ):</strong> ತಾಲ್ಲೂಕಿನ ನಿಡಗುಂದಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ<br>ತರಗತಿ ಕೊಠಡಿಗಳ ಮಂಜೂರಾತಿಗಾಗಿ ಆಗ್ರಹಿಸಿ ಮೌನ ಕಾಲ್ನಡಿಗೆ ಹಾಗೂ ಉಪವಾಸ ಪ್ರತಿಭಟನೆ ನಡೆಸಿದ್ದ ಮುಖ್ಯ ಶಿಕ್ಷಕ ವೀರಣ್ಣ ಮಡಿವಾಳರ ಅವರನ್ನು ಗುರುವಾರ ಸೇವೆಯಿಂದ ಅಮಾನತು ಮಾಡಲಾಗಿದೆ.</p> <p>‘ಸರ್ಕಾರಿ ನೌಕರನಾಗಿ ಅದರಲ್ಲೂ ಮುಖ್ಯಶಿಕ್ಷಕನಾಗಿ ಇಲಾಖೆ ವಿರುದ್ಧ ಪ್ರತಿಭಟಿಸಿ, ಇಲಾಖೆ ಹಾಗೂ ಸರ್ಕಾರಕ್ಕೆ ಮುಜು’ಗರ ಉಂಟು ಮಾಡಿದ್ದೀರಿ. ಈಗಾಗಲೇ ಎರಡು ಕೊಠಡಿ ಮಂಜೂರು ಆಗಿವೆ. ಶೀಘ್ರ ಕೆಲಸಗಳು ಆರಂಭವಾಗಲಿವೆ ಎಂದು ತಿಳಿ ಹೇಳಿದರೂ ಅನುಚಿತವಾಗಿ ವರ್ತಿಸಿದ್ದೀರಿ. ಈ ಎಲ್ಲದರ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ’ ಎಂದು ರಾಯಬಾಗ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜಪ್ಪ.ಆರ್ ತಿಳಿಸಿದ್ದಾರೆ.</p> <p>ಇದಕ್ಕೆ ವೀರಣ್ಣ ಮಡಿವಾಳರ, ‘ಶಾಲೆಯ ಅಭಿವೃದ್ಧಿಗೆ 9 ವರ್ಷಗಳಿಂದ ಶ್ರಮಿಸುತ್ತಿದ್ದೇನೆ. ಇದಕ್ಕೆ ಸಾಕ್ಷಿಯಾಗಿ ಶಾಲೆಗೆ ಹಲವು ಪ್ರಶಸ್ತಿಗಳು ಬಂದಿವೆ. ಸರಿಯಾದ ವ್ಯವಸ್ಥೆ ಇಲ್ಲದೇ ಕೂರಲು ಕಷ್ಟ ಎಂದು ಮಕ್ಕಳು ಹೇಳಿದ ಕಾರಣಕ್ಕೆ ಪ್ರತಿಭಟನೆ ನಡೆಸಿದೆ’ ಎಂದಿದ್ದಾರೆ. </p> <p>‘ನಾನು ಸರಕಾರದ ಘನತೆ ಹೆಚ್ಚಿಸುವ ಕೆಲಸ ಮಾಡಿದ್ದೇನೆ, ಇಲಾಖೆ ಅಥವಾ ಸರ್ಕಾರಕ್ಕೆ ಮುಜುಗರ ತಂದಿಲ್ಲ. ನಾಲ್ಕು ಕೊಠಡಿ ನಿರ್ಮಿಸಿಕೊಡಿ. ಕನಸಿನ ಶಾಲೆ ನಿರ್ಮಿಸಲು ನಮ್ಮ ಜೊತೆ ಕೈಜೋಡಿಸಿ’ ಎಂದು ಕೋರಿದ್ದಾರೆ. </p>.ಬೆಳಗಾವಿ: ಶಾಲೆಯ ಕೊಠಡಿಗಳಿಗಾಗಿ ಪ್ರತಿಭಟಿಸಿದ ಮುಖ್ಯಶಿಕ್ಷಕ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಬಾಗ (ಬೆಳಗಾವಿ ಜಿಲ್ಲೆ):</strong> ತಾಲ್ಲೂಕಿನ ನಿಡಗುಂದಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ<br>ತರಗತಿ ಕೊಠಡಿಗಳ ಮಂಜೂರಾತಿಗಾಗಿ ಆಗ್ರಹಿಸಿ ಮೌನ ಕಾಲ್ನಡಿಗೆ ಹಾಗೂ ಉಪವಾಸ ಪ್ರತಿಭಟನೆ ನಡೆಸಿದ್ದ ಮುಖ್ಯ ಶಿಕ್ಷಕ ವೀರಣ್ಣ ಮಡಿವಾಳರ ಅವರನ್ನು ಗುರುವಾರ ಸೇವೆಯಿಂದ ಅಮಾನತು ಮಾಡಲಾಗಿದೆ.</p> <p>‘ಸರ್ಕಾರಿ ನೌಕರನಾಗಿ ಅದರಲ್ಲೂ ಮುಖ್ಯಶಿಕ್ಷಕನಾಗಿ ಇಲಾಖೆ ವಿರುದ್ಧ ಪ್ರತಿಭಟಿಸಿ, ಇಲಾಖೆ ಹಾಗೂ ಸರ್ಕಾರಕ್ಕೆ ಮುಜು’ಗರ ಉಂಟು ಮಾಡಿದ್ದೀರಿ. ಈಗಾಗಲೇ ಎರಡು ಕೊಠಡಿ ಮಂಜೂರು ಆಗಿವೆ. ಶೀಘ್ರ ಕೆಲಸಗಳು ಆರಂಭವಾಗಲಿವೆ ಎಂದು ತಿಳಿ ಹೇಳಿದರೂ ಅನುಚಿತವಾಗಿ ವರ್ತಿಸಿದ್ದೀರಿ. ಈ ಎಲ್ಲದರ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ’ ಎಂದು ರಾಯಬಾಗ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜಪ್ಪ.ಆರ್ ತಿಳಿಸಿದ್ದಾರೆ.</p> <p>ಇದಕ್ಕೆ ವೀರಣ್ಣ ಮಡಿವಾಳರ, ‘ಶಾಲೆಯ ಅಭಿವೃದ್ಧಿಗೆ 9 ವರ್ಷಗಳಿಂದ ಶ್ರಮಿಸುತ್ತಿದ್ದೇನೆ. ಇದಕ್ಕೆ ಸಾಕ್ಷಿಯಾಗಿ ಶಾಲೆಗೆ ಹಲವು ಪ್ರಶಸ್ತಿಗಳು ಬಂದಿವೆ. ಸರಿಯಾದ ವ್ಯವಸ್ಥೆ ಇಲ್ಲದೇ ಕೂರಲು ಕಷ್ಟ ಎಂದು ಮಕ್ಕಳು ಹೇಳಿದ ಕಾರಣಕ್ಕೆ ಪ್ರತಿಭಟನೆ ನಡೆಸಿದೆ’ ಎಂದಿದ್ದಾರೆ. </p> <p>‘ನಾನು ಸರಕಾರದ ಘನತೆ ಹೆಚ್ಚಿಸುವ ಕೆಲಸ ಮಾಡಿದ್ದೇನೆ, ಇಲಾಖೆ ಅಥವಾ ಸರ್ಕಾರಕ್ಕೆ ಮುಜುಗರ ತಂದಿಲ್ಲ. ನಾಲ್ಕು ಕೊಠಡಿ ನಿರ್ಮಿಸಿಕೊಡಿ. ಕನಸಿನ ಶಾಲೆ ನಿರ್ಮಿಸಲು ನಮ್ಮ ಜೊತೆ ಕೈಜೋಡಿಸಿ’ ಎಂದು ಕೋರಿದ್ದಾರೆ. </p>.ಬೆಳಗಾವಿ: ಶಾಲೆಯ ಕೊಠಡಿಗಳಿಗಾಗಿ ಪ್ರತಿಭಟಿಸಿದ ಮುಖ್ಯಶಿಕ್ಷಕ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>