ಬೆಳಗಾವಿ: ‘ಇಲ್ಲಿನ ರೈಲು ನಿಲ್ದಾಣದ ನಿರ್ಮಾಣ ಕಾಮಗಾರಿಯನ್ನು ಸ್ಥಳೀಯ ಕಾರ್ಮಿಕರನ್ನು ಬಳಸಿಕೊಂಡು ಮುಂದಿನ ವರ್ಷದ ಮಾರ್ಚ್ಗೆ ಪೂರ್ಣಗೊಳಿಸಬೇಕು’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅಧಿಕಾರಿಗಳಿಗೆ ಸೂಚಿಸಿದರು.
ಗುರುವಾರ ಕಾಮಗಾರಿ ಪರಿಶೀಲಿಸಿದ ಅವರು, ‘ಈ ವರ್ಷದ ನವೆಂಬರ್ಗೆ ಪೂರ್ಣಗೊಳ್ಳಬೇಕಿತ್ತು. ಆದರೆ ಕೋವಿಡ್–19 ಲಾಕ್ಡೌನ್ ಹಿನ್ನೆಲೆಯಲ್ಲಿ ಕಾಮಗಾರಿ ವಿಳಂಬವಾಗಿದೆ’ ಎಂದರು.