<p><strong>ಗೋಕಾಕ:</strong> ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಕೆಲವು ರೈಲುಗಳ ವೇಳೆ ಬದಲಾವಣೆ ಮಾಡಲು ರೈಲ್ವೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವುದಾಗಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತಿಳಿಸಿದ್ದಾರೆ.</p>.<p>ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಬೆಂಗಳೂರಿನಿಂದ ರಾತ್ರಿ 9ಕ್ಕೆ ಹೊರಟು ಬೆಳಗಾವಿ ನಗರವನ್ನು ಮಾರನೇ ದಿನ ಬೆಳಿಗ್ಗೆ 5.45ರ ನಂತರ ತಲುಪುತ್ತಿರುವ ಸೂಪರ್ ಫಾಸ್ಟ್ ರೈಲು ಸಂಖ್ಯೆ 20654 ಮೂಲಕ ಆಗಮಿಸುವ ಬೆಳಗಾವಿ ಜಿಲ್ಲೆಯ ಪ್ರಯಾಣಿಕರು ಪಾಶ್ಚಾಪುರ, ಗೋಕಾಕ-ರೋಡ್, ಘಟಪ್ರಭಾ, ರಾಯಭಾಗ, ಕುಡಚಿ ಮೊದಲಾದೆಡೆ ಪ್ರಯಾಣಿಸಲು ಅನುಕೂಲವಾಗುವಂತೆ, ಪ್ರಸ್ತುತ ಬೆಳಿಗ್ಗೆ 5.45ಕ್ಕೆ ಬೆಳಗಾವಿಯಿಂದ ಹೊರಡುತ್ತಿರುವ ಬೆಳಗಾವಿ-ಮೀರಜ್ ಪ್ಯಾಸೆಂಜರ್ ರೈಲಿನ ಸಮಯವನ್ನು ಬೆಳಿಗ್ಗೆ 6.15 ಅಥವಾ 6.30ಕ್ಕೆ ಬದಲಾವಣೆ ಮಾಡುವಂತೆ ಪ್ರಯಾಣಿಕರಿಂದ ಕೇಳಿ ಬಂದ ಬೇಡಿಕೆ ಕುರಿತ ಪ್ರಶ್ನೆಗೆ, ಇಷ್ಟರಲ್ಲೇ ಜರುಗಲಿರುವ ಹುಬ್ಬಳ್ಳಿಯ ನೈಋತ್ಯ ರೈಲ್ವೆ ಬಳಕೆದಾರರ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾವ ಮಾಡುವೆʼ ಎಂದು ಭರವಸೆ ನೀಡಿದರು.</p>.<p>ಹುಬ್ಬಳ್ಳಿ-ದಾದರ-ಹುಬ್ಬಳ್ಳಿ (ರೈಲು ಸಂಖ್ಯೆ; 17317 ಮತ್ತು 17318) ರೈಲಿಗೆ ಗೋಕಾಕ-ರೋಡ್ ರೈಲ್ವೆ ನಿಲ್ದಾಣದಲ್ಲಿ ಒಂದು ನಿಮಿಷದ ನಿಲುಗಡೆ ಒದಗಿಸುವ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎಕ್ಸ್ಪ್ರೆಸ್ ರೈಲಿಗೆ ನಿಲುಗಡೆ ಒದಗಿಸಲು ಅಧಿಕಾರಿಗಳು ಸಮ್ಮತಿಸುವ ಸಾಧ್ಯತೆಗಳು ಅತಿ ವಿರಳ. ಆದರೂ ಈ ವಿಷಯವನ್ನು ರೈಲ್ವೆ ಅಧಿಕಾರಿಗಳೊಂದಿಗೆ ಚರ್ಚೆ ಮಾಡುವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಕಾಕ:</strong> ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಕೆಲವು ರೈಲುಗಳ ವೇಳೆ ಬದಲಾವಣೆ ಮಾಡಲು ರೈಲ್ವೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವುದಾಗಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತಿಳಿಸಿದ್ದಾರೆ.</p>.<p>ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಬೆಂಗಳೂರಿನಿಂದ ರಾತ್ರಿ 9ಕ್ಕೆ ಹೊರಟು ಬೆಳಗಾವಿ ನಗರವನ್ನು ಮಾರನೇ ದಿನ ಬೆಳಿಗ್ಗೆ 5.45ರ ನಂತರ ತಲುಪುತ್ತಿರುವ ಸೂಪರ್ ಫಾಸ್ಟ್ ರೈಲು ಸಂಖ್ಯೆ 20654 ಮೂಲಕ ಆಗಮಿಸುವ ಬೆಳಗಾವಿ ಜಿಲ್ಲೆಯ ಪ್ರಯಾಣಿಕರು ಪಾಶ್ಚಾಪುರ, ಗೋಕಾಕ-ರೋಡ್, ಘಟಪ್ರಭಾ, ರಾಯಭಾಗ, ಕುಡಚಿ ಮೊದಲಾದೆಡೆ ಪ್ರಯಾಣಿಸಲು ಅನುಕೂಲವಾಗುವಂತೆ, ಪ್ರಸ್ತುತ ಬೆಳಿಗ್ಗೆ 5.45ಕ್ಕೆ ಬೆಳಗಾವಿಯಿಂದ ಹೊರಡುತ್ತಿರುವ ಬೆಳಗಾವಿ-ಮೀರಜ್ ಪ್ಯಾಸೆಂಜರ್ ರೈಲಿನ ಸಮಯವನ್ನು ಬೆಳಿಗ್ಗೆ 6.15 ಅಥವಾ 6.30ಕ್ಕೆ ಬದಲಾವಣೆ ಮಾಡುವಂತೆ ಪ್ರಯಾಣಿಕರಿಂದ ಕೇಳಿ ಬಂದ ಬೇಡಿಕೆ ಕುರಿತ ಪ್ರಶ್ನೆಗೆ, ಇಷ್ಟರಲ್ಲೇ ಜರುಗಲಿರುವ ಹುಬ್ಬಳ್ಳಿಯ ನೈಋತ್ಯ ರೈಲ್ವೆ ಬಳಕೆದಾರರ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾವ ಮಾಡುವೆʼ ಎಂದು ಭರವಸೆ ನೀಡಿದರು.</p>.<p>ಹುಬ್ಬಳ್ಳಿ-ದಾದರ-ಹುಬ್ಬಳ್ಳಿ (ರೈಲು ಸಂಖ್ಯೆ; 17317 ಮತ್ತು 17318) ರೈಲಿಗೆ ಗೋಕಾಕ-ರೋಡ್ ರೈಲ್ವೆ ನಿಲ್ದಾಣದಲ್ಲಿ ಒಂದು ನಿಮಿಷದ ನಿಲುಗಡೆ ಒದಗಿಸುವ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎಕ್ಸ್ಪ್ರೆಸ್ ರೈಲಿಗೆ ನಿಲುಗಡೆ ಒದಗಿಸಲು ಅಧಿಕಾರಿಗಳು ಸಮ್ಮತಿಸುವ ಸಾಧ್ಯತೆಗಳು ಅತಿ ವಿರಳ. ಆದರೂ ಈ ವಿಷಯವನ್ನು ರೈಲ್ವೆ ಅಧಿಕಾರಿಗಳೊಂದಿಗೆ ಚರ್ಚೆ ಮಾಡುವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>