ಈ ಹಂಗಾಮಿನಲ್ಲಿ ಜೋಳ, ಕಡಲೆ, ಗೋಧಿ, ಗೋವಿನಜೋಳ ಪ್ರಮುಖ ಬೆಳೆಗಳು. ಆದರೆ, ಮುಂಗಾರು ಮಳೆಯ ಅಬ್ಬರ ಮತ್ತು ನೆರೆ ಹಾವಳಿಯಿಂದಾಗಿ ಹಲವು ತಾಲ್ಲೂಕುಗಳಲ್ಲಿ ನಿರೀಕ್ಷಿಸಿದಷ್ಟು ಬಿತ್ತನೆಯಾಗಿಲ್ಲ. ಅದರಲ್ಲೂ ಪ್ರವಾಹಬಾಧಿತ ಸವದತ್ತಿ, ರಾಮದುರ್ಗ, ಗೋಕಾಕ, ರಾಯಬಾಗ, ಖಾನಾಪುರ, ಬೆಳಗಾವಿ ತಾಲ್ಲೂಕುಗಳಲ್ಲಿ ವಾಡಿಕೆಯಷ್ಟು ಬಿತ್ತನೆಯಾಗಿಲ್ಲ. ಬಿತ್ತನೆ ಚಟುವಟಿಕೆಯು ಸರಾಸರಿ ಒಂದು ತಿಂಗಳು ಮುಂದಕ್ಕೆ ಹೋಗಿದ್ದು ಇದಕ್ಕೆ ಕಾರಣವಾಗಿದೆ.