ಭಾರಿ ಮಳೆಯಿಂದಾಗಿ ಯಕ್ಸಂಬಾದಲ್ಲಿ ವಾಹನಗಳು ಕೊಚ್ಚಿ ಹೋಗಿರುವ ಬಗ್ಗೆ ಮಾಧ್ಯಮದಲ್ಲಿ ಬಂದ ವರದಿ ಗಮನಿಸಿದ ಅವರು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ‘ರಸ್ತೆಯಲ್ಲಿ ನಿಲ್ಲಿಸಿದ್ದ ದ್ವಿಚಕ್ರವಾಹನಗಳು ಮತ್ತು ಕೆಲವು ಕಾರುಗಳು ಮಳೆಯ ರಭಸಕ್ಕೆ ಕೊಂಚ ದೂರದವರೆಗೆ ತೇಲಿಕೊಂಡು ಹೋಗಿವೆ. ಯಾವುದೇ ರೀತಿಯ ಹಾನಿಯಾಗಿಲ್ಲ. ಆಸ್ಪತ್ರೆಗೆ ನೀರು ನುಗ್ಗಿತ್ತು. ಕೆಲ ಹೊತ್ತಿನಲ್ಲಿಯೇ ನೀರನ್ನು ಹೊರಕ್ಕೆ ಹಾಕಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಮಾಹಿತಿ ನೀಡಿದರು.