<p><strong>ಖಾನಾಪುರ</strong>: ತಾಲ್ಲೂಕಿನಲ್ಲಿ ಸತತ ಮಳೆಯಿಂದಾಗಿ ಜಾಂಬೋಟಿ ಮತ್ತು ಗುಂಜಿ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಭತ್ತದ ಗದ್ದೆಗಳು ನೀರಿನಲ್ಲಿ ಮುಳುಗಿವೆ.</p>.<p>ಸಾವರಗಾಳಿ, ಸಂಗರಗಾಳಿ, ಗುಂಜಿ, ಶಿರೋಲಿ, ನೇರಸಾ, ಗಂಗವಾಳಿ, ಹರೂರಿ, ತಿವೋಲಿ ಸೇರಿದಂತೆ ವಿವಿಧ ಗ್ರಾಮಗಳ 2 ಸಾವಿರ ಹೆಕ್ಟೇರ್ಗೂ ಹೆಚ್ಚಿನ ಭತ್ತದ ಗದ್ದೆಗಳು ಜಲಾವೃತವಾಗಿದೆ. ಜೂನ್ನಲ್ಲಿ ಬಿತ್ತನೆಯಾಗಿದ್ದ ಭತ್ತ ಆಗಸ್ಟ್ ಮಧ್ಯ ಭಾಗದಲ್ಲಿ ಸುರಿದ ಜಡಿ ಮಳೆಯಿಂದಾಗಿ ತೊಂದರೆಗೀಡಾಗಿತ್ತು. ನಂತರ ಬಿಸಿಲು ಬಿದ್ದಿದ್ದರಿಂದ ಪೈರುಗಳು ಸುಧಾರಣೆ ಕಂಡಿದ್ದವು. ಆದರೆ ಈಗ ಮತ್ತೆ ಮಳೆ ಕಾಡಿದೆ. ಪರಿಣಾಮ ತೆನೆ ಕಟ್ಟುವ ಹಂತದಲ್ಲಿರುವ ಬೆಳೆಗೆ ಹಾನಿಯಾಗಲಿದೆ ಎಂದು ರೈತರು ಹೇಳುತ್ತಾರೆ.</p>.<p>***</p>.<p><strong>ಹಂಗಾಮಿನಲ್ಲಿ ಉತ್ತಮ ಬೆಳೆ ನಿರೀಕ್ಷೆಯಲ್ಲಿದ್ದ ನಮಗೆ ಮತ್ತೆ ವರುಣಾರ್ಭಟದಿಂದ ಹಾನಿ ಭೀತಿ ಎದುರಾಗಿದೆ. ತಾಲ್ಲೂಕಿನ ಪ್ರಮುಖ ಬೆಳೆಯಾದ ಭತ್ತಕ್ಕೆ ರೋಗ ಬಾಧೆಯಿಂದ ತೊಂದರೆ ಆಗಲಿದೆ</strong></p>.<p><strong>-ಮಹಾಂತೇಶ ರಾಹೂತ, ರೈತ, ನಂದಗಡ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಖಾನಾಪುರ</strong>: ತಾಲ್ಲೂಕಿನಲ್ಲಿ ಸತತ ಮಳೆಯಿಂದಾಗಿ ಜಾಂಬೋಟಿ ಮತ್ತು ಗುಂಜಿ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಭತ್ತದ ಗದ್ದೆಗಳು ನೀರಿನಲ್ಲಿ ಮುಳುಗಿವೆ.</p>.<p>ಸಾವರಗಾಳಿ, ಸಂಗರಗಾಳಿ, ಗುಂಜಿ, ಶಿರೋಲಿ, ನೇರಸಾ, ಗಂಗವಾಳಿ, ಹರೂರಿ, ತಿವೋಲಿ ಸೇರಿದಂತೆ ವಿವಿಧ ಗ್ರಾಮಗಳ 2 ಸಾವಿರ ಹೆಕ್ಟೇರ್ಗೂ ಹೆಚ್ಚಿನ ಭತ್ತದ ಗದ್ದೆಗಳು ಜಲಾವೃತವಾಗಿದೆ. ಜೂನ್ನಲ್ಲಿ ಬಿತ್ತನೆಯಾಗಿದ್ದ ಭತ್ತ ಆಗಸ್ಟ್ ಮಧ್ಯ ಭಾಗದಲ್ಲಿ ಸುರಿದ ಜಡಿ ಮಳೆಯಿಂದಾಗಿ ತೊಂದರೆಗೀಡಾಗಿತ್ತು. ನಂತರ ಬಿಸಿಲು ಬಿದ್ದಿದ್ದರಿಂದ ಪೈರುಗಳು ಸುಧಾರಣೆ ಕಂಡಿದ್ದವು. ಆದರೆ ಈಗ ಮತ್ತೆ ಮಳೆ ಕಾಡಿದೆ. ಪರಿಣಾಮ ತೆನೆ ಕಟ್ಟುವ ಹಂತದಲ್ಲಿರುವ ಬೆಳೆಗೆ ಹಾನಿಯಾಗಲಿದೆ ಎಂದು ರೈತರು ಹೇಳುತ್ತಾರೆ.</p>.<p>***</p>.<p><strong>ಹಂಗಾಮಿನಲ್ಲಿ ಉತ್ತಮ ಬೆಳೆ ನಿರೀಕ್ಷೆಯಲ್ಲಿದ್ದ ನಮಗೆ ಮತ್ತೆ ವರುಣಾರ್ಭಟದಿಂದ ಹಾನಿ ಭೀತಿ ಎದುರಾಗಿದೆ. ತಾಲ್ಲೂಕಿನ ಪ್ರಮುಖ ಬೆಳೆಯಾದ ಭತ್ತಕ್ಕೆ ರೋಗ ಬಾಧೆಯಿಂದ ತೊಂದರೆ ಆಗಲಿದೆ</strong></p>.<p><strong>-ಮಹಾಂತೇಶ ರಾಹೂತ, ರೈತ, ನಂದಗಡ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>