ರೈತರ ಕಬ್ಬು, ಭತ್ತ, ಗೋವಿನಜೋಳ ಸೇರಿದಂತೆ ವಿವಿಧ 150 ಎಕರೆ ಬೆಳೆ ಸಂಪೂರ್ಣ ನಾಶವಾಗಿದೆ. ಅಲ್ಲದೇ ದನ–ಕರುಗಳು ನೀರಿನಲ್ಲಿ ಸಿಲುಕಿ ಯಾತನೆ ಅನುಭವಿಸುತ್ತಿವೆ. ರೈತರು ತೀವ್ರ ಆತಂಕಗೊಂಡಿದ್ದಾರೆ. ಹೂಲಿಕಟ್ಟಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮೂರು ರಸ್ತೆಗಳು ಕೊಚ್ಚಿ ಹೋಗಿವೆ. ಗ್ರಾಮಸ್ಥರು ಪರದಾಡು ಸ್ಥಿತಿ ನಿರ್ಮಾಣವಾಗಿದೆ.